<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಾರ್ವತಿ ಬೆಟ್ಟದಲ್ಲಿ ಭಾನುವಾರ ನಡೆದ ಜಾತ್ರಾ ಮಹೋತ್ಸವದಲ್ಲಿ ರಥದ ಚಕ್ರ ಹರಿದು ಯುವಕ ಮೃತ ಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.</p>.<p>ಕಂದೇಗಾಲ ಗ್ರಾಮದ ಸರ್ಪಭೂಷಣ್ (27) ಮೃತ ಯುವಕ. ಅದೇ ಗ್ರಾಮದ ಸ್ವಾಮಿ (40) ಹಾಗೂ ಕೊಡಸೋಗೆ ಗ್ರಾಮದ ಕರಿನಾಯಕ (50) ಎಂಬುವವರ ಕಾಲು ಮುರಿದಿದೆ. </p>.<p>ಜಾತ್ರೆಯ ಅಂಗವಾಗಿ ನಡೆದ ರಥೋತ್ಸವದ ಸಂದರ್ಭದಲ್ಲಿ ಭಕ್ತರು ಒಮ್ಮೆಲೆ ತೇರು ಎಳೆದಿದ್ದರಿಂದ, ರಥ ವೇಗವಾಗಿ ಮುಂದೆ ಚಲಿಸಿತು. ಈ ವೇಳೆ ನೂಕು ನುಗ್ಗಲು ಉಂಟಾಗಿ ಸರ್ಪಭೂಷಣ್ ಅವರು ಕೆಳಕ್ಕೆ ಬಿದ್ದು ಚಕ್ರಕ್ಕೆ ಸಿಲುಕಿದರು. ರಥವು ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.</p>.<p>ಇನ್ನಿಬ್ಬರ ಕಾಲಿನ ಮೇಲೆ ತೇರು ಹರಿದಿದ್ದರಿಂದ ಕಾಲು ಮುರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಗಾಯಗೊಂಡವರಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆನೀಡಿ, ಮೈಸೂರಿಗೆ ಕಳುಹಿಸಲಾಗಿದೆ.</p>.<p>ಶಾಸಕ ಸಿ.ಎಸ್. ನಿರಂಜನ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಾರ್ವತಿ ಬೆಟ್ಟದಲ್ಲಿ ಭಾನುವಾರ ನಡೆದ ಜಾತ್ರಾ ಮಹೋತ್ಸವದಲ್ಲಿ ರಥದ ಚಕ್ರ ಹರಿದು ಯುವಕ ಮೃತ ಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.</p>.<p>ಕಂದೇಗಾಲ ಗ್ರಾಮದ ಸರ್ಪಭೂಷಣ್ (27) ಮೃತ ಯುವಕ. ಅದೇ ಗ್ರಾಮದ ಸ್ವಾಮಿ (40) ಹಾಗೂ ಕೊಡಸೋಗೆ ಗ್ರಾಮದ ಕರಿನಾಯಕ (50) ಎಂಬುವವರ ಕಾಲು ಮುರಿದಿದೆ. </p>.<p>ಜಾತ್ರೆಯ ಅಂಗವಾಗಿ ನಡೆದ ರಥೋತ್ಸವದ ಸಂದರ್ಭದಲ್ಲಿ ಭಕ್ತರು ಒಮ್ಮೆಲೆ ತೇರು ಎಳೆದಿದ್ದರಿಂದ, ರಥ ವೇಗವಾಗಿ ಮುಂದೆ ಚಲಿಸಿತು. ಈ ವೇಳೆ ನೂಕು ನುಗ್ಗಲು ಉಂಟಾಗಿ ಸರ್ಪಭೂಷಣ್ ಅವರು ಕೆಳಕ್ಕೆ ಬಿದ್ದು ಚಕ್ರಕ್ಕೆ ಸಿಲುಕಿದರು. ರಥವು ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.</p>.<p>ಇನ್ನಿಬ್ಬರ ಕಾಲಿನ ಮೇಲೆ ತೇರು ಹರಿದಿದ್ದರಿಂದ ಕಾಲು ಮುರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಗಾಯಗೊಂಡವರಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆನೀಡಿ, ಮೈಸೂರಿಗೆ ಕಳುಹಿಸಲಾಗಿದೆ.</p>.<p>ಶಾಸಕ ಸಿ.ಎಸ್. ನಿರಂಜನ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>