ಅಮಾನತು ಮಾಡಿ ತನಿಖೆ: ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು, ‘ಜೀಪಿನಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಪ್ಪಿದೆಯೋ ಇಲ್ಲವೋ, ನಿರ್ಲಕ್ಷ್ಯ ವಹಿಸಿದ್ದಾರೋ ಇಲ್ಲವೋ, ತಕ್ಷಣವೇ ಅವರನ್ನು ಅಮಾನತು ಮಾಡುತ್ತೇನೆ. ಈ ಬಗ್ಗೆ ತನಿಖೆ ನಡೆಸುತ್ತೇವೆ. ನಿಮ್ಮ ದೂರನ್ನೂ ಕೊಡಿ. ಕೂಲಂಕಷವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.