<p><strong>ಯಳಂದೂರು</strong>: ಬಾಲಕಿಯೊಬ್ಬಳ ಅಪಹರಣ ಪ್ರಕರಣಕ್ಕೆ ಸಂಬಂಧ ಯುವಕನೊಬ್ಬನನ್ನು ಪೊಲೀಸರು ವಿಚಾರಣೆಗಾಗಿ ಜೀಪಿನಲ್ಲಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಆ ಯುವಕ ಜೀಪಿನಿಂದ ಹೊರಕ್ಕೆ ಹಾರಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮದ್ದೂರು–ಯರಿಯೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.</p>.<p>ಕೊಳ್ಲೇಗಾಲ ತಾಲ್ಲೂಕು ಕುಂತೂರು ಮೋಳೆ ನಿವಾಸಿ ನಂಜುಂಡಶೆಟ್ಟಿ ಅವರ ಮಗ ನಿಂಗರಾಜು (21) ಮೃತಪಟ್ಟವರು.</p>.<p>ಬಾಲಕಿಯೊಬ್ಬಳ ಅಪಹರಣಕ್ಕೆ ಸಂಬಂಧಿಸಿದಂತೆ ಮಾಂಬಳ್ಳಿ ಠಾಣೆಯಲ್ಲಿ ಎಂಟು ದಿನಗಳ ಹಿಂದೆ ದೂರು ದಾಖಲಾಗಿತ್ತು.</p>.<p>ಯುವಕ ಹಾಗೂ ಬಾಲಕಿ ಚಾಮರಾಜನಗರದಲ್ಲಿ ಮಂಗಳವಾರ ಪತ್ತೆಯಾಗಿದ್ದರು. ಮಾಂಬಳ್ಳಿ ಪೊಲೀಸರು ಅವರನ್ನು ಪೊಲೀಸ್ ಜೀಪಿನಲ್ಲಿ ಮಾಂಬಳ್ಳಿ ಠಾಣೆಗೆ ಕರೆದೊಯ್ಯುತ್ತಿರುವಾಗ ಮದ್ದೂರು–ಯರಿಯೂರು ನಡುವೆ ಯುವಕ ಏಕಾಏಕಿ ಜೀಪಿನಿಂದ ಹೊರಗಡೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಲೆ ರಸ್ತೆಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಯಳಂದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ತೀವ್ರ ರಕ್ತಸ್ರಾವದಿಂದ ನಿಂಗರಾಜು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಗ್ರಾಮಸ್ಥರ ಆಕ್ರೋಶ: ವಿಷಯ ತಿಳಿಯುತ್ತಿದ್ದಂತೆಯೇ ಕುಂತೂರು ಮೋಳೆ ಗ್ರಾಮಸ್ಥರು ಯಳಂದೂರುಠಾಣೆ ಮುಂದೆ ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಗನ ಸಾವಿಗೆ ಪೊಲೀಸರೇ ಕಾರಣ. ಅವರ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ. ಏಕಾಏಕಿ ಬಾಗಿಲು ತೆಗೆದು ಹಾರುವಾಗ ಜೀಪಿನಲ್ಲಿದ್ದ ಪೊಲೀಸರು ಏನು ಮಾಡುತ್ತಿದ್ದರು?ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಈ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು’ ಎಂದು ಪೋಷಕರು ಹಾಗೂ ಗ್ರಾಮಸ್ಥರು ಆಗ್ರಹಿಸಿದರು.</p>.<p>ಸ್ಥಳದಲ್ಲಿದ್ದ ಡಿವೈಎಸ್ಪಿ ಮಾತನಾಡಿ, ‘ನಾವು ಯುವಕನನ್ನು ಆರೋಪಿಯಂತೆ ನಡೆಸಿಕೊಂಡಿಲ್ಲ. ಕೈಗೆ ಬೇಡಿಯನ್ನೂ ಹಾಕಿರಲಿಲ್ಲ. ನಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ನೇಹಮಯವಾಗಿಯೇ ಮಾತನಾಡಿದ್ದಾರೆ. ಆತ ಒತ್ತಡದಿಂದ ಏಕಾಏಕಿ ಹೊರಗೆ ಜಿಗಿದಿದ್ದಾನೆ’ ಎಂದು ಹೇಳಿದರು. ಗ್ರಾಮಸ್ಥರು ಆ ಮಾತನ್ನು ಒಪ್ಪಲಿಲ್ಲ.</p>.<p class="Subhead">ಅಮಾನತು ಮಾಡಿ ತನಿಖೆ: ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು, ‘ಜೀಪಿನಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಪ್ಪಿದೆಯೋ ಇಲ್ಲವೋ, ನಿರ್ಲಕ್ಷ್ಯ ವಹಿಸಿದ್ದಾರೋ ಇಲ್ಲವೋ, ತಕ್ಷಣವೇ ಅವರನ್ನು ಅಮಾನತು ಮಾಡುತ್ತೇನೆ. ಈ ಬಗ್ಗೆ ತನಿಖೆ ನಡೆಸುತ್ತೇವೆ. ನಿಮ್ಮ ದೂರನ್ನೂ ಕೊಡಿ. ಕೂಲಂಕಷವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ಬಾಲಕಿಯೊಬ್ಬಳ ಅಪಹರಣ ಪ್ರಕರಣಕ್ಕೆ ಸಂಬಂಧ ಯುವಕನೊಬ್ಬನನ್ನು ಪೊಲೀಸರು ವಿಚಾರಣೆಗಾಗಿ ಜೀಪಿನಲ್ಲಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಆ ಯುವಕ ಜೀಪಿನಿಂದ ಹೊರಕ್ಕೆ ಹಾರಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮದ್ದೂರು–ಯರಿಯೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.</p>.<p>ಕೊಳ್ಲೇಗಾಲ ತಾಲ್ಲೂಕು ಕುಂತೂರು ಮೋಳೆ ನಿವಾಸಿ ನಂಜುಂಡಶೆಟ್ಟಿ ಅವರ ಮಗ ನಿಂಗರಾಜು (21) ಮೃತಪಟ್ಟವರು.</p>.<p>ಬಾಲಕಿಯೊಬ್ಬಳ ಅಪಹರಣಕ್ಕೆ ಸಂಬಂಧಿಸಿದಂತೆ ಮಾಂಬಳ್ಳಿ ಠಾಣೆಯಲ್ಲಿ ಎಂಟು ದಿನಗಳ ಹಿಂದೆ ದೂರು ದಾಖಲಾಗಿತ್ತು.</p>.<p>ಯುವಕ ಹಾಗೂ ಬಾಲಕಿ ಚಾಮರಾಜನಗರದಲ್ಲಿ ಮಂಗಳವಾರ ಪತ್ತೆಯಾಗಿದ್ದರು. ಮಾಂಬಳ್ಳಿ ಪೊಲೀಸರು ಅವರನ್ನು ಪೊಲೀಸ್ ಜೀಪಿನಲ್ಲಿ ಮಾಂಬಳ್ಳಿ ಠಾಣೆಗೆ ಕರೆದೊಯ್ಯುತ್ತಿರುವಾಗ ಮದ್ದೂರು–ಯರಿಯೂರು ನಡುವೆ ಯುವಕ ಏಕಾಏಕಿ ಜೀಪಿನಿಂದ ಹೊರಗಡೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಲೆ ರಸ್ತೆಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಯಳಂದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ತೀವ್ರ ರಕ್ತಸ್ರಾವದಿಂದ ನಿಂಗರಾಜು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಗ್ರಾಮಸ್ಥರ ಆಕ್ರೋಶ: ವಿಷಯ ತಿಳಿಯುತ್ತಿದ್ದಂತೆಯೇ ಕುಂತೂರು ಮೋಳೆ ಗ್ರಾಮಸ್ಥರು ಯಳಂದೂರುಠಾಣೆ ಮುಂದೆ ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಗನ ಸಾವಿಗೆ ಪೊಲೀಸರೇ ಕಾರಣ. ಅವರ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ. ಏಕಾಏಕಿ ಬಾಗಿಲು ತೆಗೆದು ಹಾರುವಾಗ ಜೀಪಿನಲ್ಲಿದ್ದ ಪೊಲೀಸರು ಏನು ಮಾಡುತ್ತಿದ್ದರು?ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಈ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು’ ಎಂದು ಪೋಷಕರು ಹಾಗೂ ಗ್ರಾಮಸ್ಥರು ಆಗ್ರಹಿಸಿದರು.</p>.<p>ಸ್ಥಳದಲ್ಲಿದ್ದ ಡಿವೈಎಸ್ಪಿ ಮಾತನಾಡಿ, ‘ನಾವು ಯುವಕನನ್ನು ಆರೋಪಿಯಂತೆ ನಡೆಸಿಕೊಂಡಿಲ್ಲ. ಕೈಗೆ ಬೇಡಿಯನ್ನೂ ಹಾಕಿರಲಿಲ್ಲ. ನಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ನೇಹಮಯವಾಗಿಯೇ ಮಾತನಾಡಿದ್ದಾರೆ. ಆತ ಒತ್ತಡದಿಂದ ಏಕಾಏಕಿ ಹೊರಗೆ ಜಿಗಿದಿದ್ದಾನೆ’ ಎಂದು ಹೇಳಿದರು. ಗ್ರಾಮಸ್ಥರು ಆ ಮಾತನ್ನು ಒಪ್ಪಲಿಲ್ಲ.</p>.<p class="Subhead">ಅಮಾನತು ಮಾಡಿ ತನಿಖೆ: ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು, ‘ಜೀಪಿನಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಪ್ಪಿದೆಯೋ ಇಲ್ಲವೋ, ನಿರ್ಲಕ್ಷ್ಯ ವಹಿಸಿದ್ದಾರೋ ಇಲ್ಲವೋ, ತಕ್ಷಣವೇ ಅವರನ್ನು ಅಮಾನತು ಮಾಡುತ್ತೇನೆ. ಈ ಬಗ್ಗೆ ತನಿಖೆ ನಡೆಸುತ್ತೇವೆ. ನಿಮ್ಮ ದೂರನ್ನೂ ಕೊಡಿ. ಕೂಲಂಕಷವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>