<p><strong>ಚಾಮರಾಜನಗರ: </strong>ತಾಲ್ಲೂಕಿನ ಹರವೆ ಗ್ರಾಮದ ಯುವಕರೊಬ್ಬರು ಸ್ನೇಹಿತರೊಂದಿಗೆಪುದುಚೇರಿಗೆ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಸಮುದ್ರದ ನೀರಿನಲ್ಲಿ ಮುಳುಗಿ ಭಾನುವಾರ ಮೃತಪಟ್ಟಿದ್ದಾರೆ.</p>.<p>ಗ್ರಾಮದ ನಿವಾಸಿ ಅಂಗಡಿ ಬಸಪ್ಪ ಎಂಬುವವರ ಪುತ್ರಬಿ.ದೀಪು (26) ಮೃತಪಟ್ಟವರು.</p>.<p>ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿರುವ ದೀಪು ಅವರು ಎಂಟು ಮಂದಿ ಸ್ನೇಹಿತರೊಂದಿಗೆ ಪುದುಚೇರಿಗೆ ಪ್ರವಾಸ ಹೋಗಿದ್ದರು. ಅಲ್ಲಿನ ಬೀಚ್ ಒಂದರಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ ಇನ್ನೂ ಮೂವರು ಅಸ್ವಸ್ಥರಾಗಿದ್ದಾರೆ. ಯುವತಿಯೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದ್ದು, ಇನ್ನಿಬ್ಬರು ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.</p>.<p>ದೀಪು ಅವರ ಮೃತದೇಹವನ್ನು ಭಾನುವಾರ ತಡರಾತ್ರಿ ಹರವೆಗೆ ತರಲಾಯಿತು. ಸೋಮವಾರ ಬೆಳಿಗ್ಗೆ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ತಾಲ್ಲೂಕಿನ ಹರವೆ ಗ್ರಾಮದ ಯುವಕರೊಬ್ಬರು ಸ್ನೇಹಿತರೊಂದಿಗೆಪುದುಚೇರಿಗೆ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಸಮುದ್ರದ ನೀರಿನಲ್ಲಿ ಮುಳುಗಿ ಭಾನುವಾರ ಮೃತಪಟ್ಟಿದ್ದಾರೆ.</p>.<p>ಗ್ರಾಮದ ನಿವಾಸಿ ಅಂಗಡಿ ಬಸಪ್ಪ ಎಂಬುವವರ ಪುತ್ರಬಿ.ದೀಪು (26) ಮೃತಪಟ್ಟವರು.</p>.<p>ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿರುವ ದೀಪು ಅವರು ಎಂಟು ಮಂದಿ ಸ್ನೇಹಿತರೊಂದಿಗೆ ಪುದುಚೇರಿಗೆ ಪ್ರವಾಸ ಹೋಗಿದ್ದರು. ಅಲ್ಲಿನ ಬೀಚ್ ಒಂದರಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ ಇನ್ನೂ ಮೂವರು ಅಸ್ವಸ್ಥರಾಗಿದ್ದಾರೆ. ಯುವತಿಯೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದ್ದು, ಇನ್ನಿಬ್ಬರು ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.</p>.<p>ದೀಪು ಅವರ ಮೃತದೇಹವನ್ನು ಭಾನುವಾರ ತಡರಾತ್ರಿ ಹರವೆಗೆ ತರಲಾಯಿತು. ಸೋಮವಾರ ಬೆಳಿಗ್ಗೆ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>