<p><strong>ಚಾಮರಾಜನಗರ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್, ವಿಶೇಷ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ. </p>.<p>ತಾಲ್ಲೂಕಿನ ವಡ್ಗಲ್ಪುರ ಗ್ರಾಮದ ನಾಗೇಂದ್ರ (22) ಶಿಕ್ಷೆಗೆ ಗುರಿಯಾದವನು. ಯುವಕನು ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ. 2021ರ ಜುಲೈ 20 ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖಾಧಿಕಾರಿ ಬಿ. ಪುಟ್ಟಸ್ವಾಮಿ ನಾಗೇಂದ್ರನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶರಾದ ಎನ್. ಆರ್. ಲೋಕಪ್ಪ ಅವರು ನಾಗೇಂದ್ರನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.</p>.<p>ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ತಿಂಗಳ ಒಳಗಾಗಿ ₹3 ಲಕ್ಷ ಪರಿಹಾರ ನೀಡಬೇಕು ಎಂದೂ ಅವರು ಆದೇಶದಲ್ಲಿ ಹೇಳಿದ್ದಾರೆ.</p>.<p>ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಯೋಗೇಶ್ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್, ವಿಶೇಷ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ. </p>.<p>ತಾಲ್ಲೂಕಿನ ವಡ್ಗಲ್ಪುರ ಗ್ರಾಮದ ನಾಗೇಂದ್ರ (22) ಶಿಕ್ಷೆಗೆ ಗುರಿಯಾದವನು. ಯುವಕನು ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ. 2021ರ ಜುಲೈ 20 ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖಾಧಿಕಾರಿ ಬಿ. ಪುಟ್ಟಸ್ವಾಮಿ ನಾಗೇಂದ್ರನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶರಾದ ಎನ್. ಆರ್. ಲೋಕಪ್ಪ ಅವರು ನಾಗೇಂದ್ರನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.</p>.<p>ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ತಿಂಗಳ ಒಳಗಾಗಿ ₹3 ಲಕ್ಷ ಪರಿಹಾರ ನೀಡಬೇಕು ಎಂದೂ ಅವರು ಆದೇಶದಲ್ಲಿ ಹೇಳಿದ್ದಾರೆ.</p>.<p>ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಯೋಗೇಶ್ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>