<p><strong>ಮಹದೇಶ್ವರ ಬೆಟ್ಟ: </strong>ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆ ಶನಿವಾರದಿಂದ (ಏ.10) ಆರಂಭವಾಗಲಿದ್ದು, ಕೋವಿಡ್ ಕಾರಣಕ್ಕೆ ಸರಳವಾಗಿ ನಡೆಯಲಿದೆ.</p>.<p>ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಸೇರಿದಂತೆ 200 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.</p>.<p>ನಾಲ್ಕು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕವಲ್ಲದೆ ತಮಿಳುನಾಡಿನ ಲಕ್ಷಾಂತರಭಕ್ತರು ಪ್ರತಿ ವರ್ಷ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷವೂ ಜಾತ್ರೆ ರದ್ದಾಗಿತ್ತು.</p>.<p>ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನದ ಸೇವೆ, ಭಾನುವಾರ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.</p>.<p>ಕೊನೆಯ ದಿನ ರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳುವುದು ವಾಡಿಕೆ. ಅದರ ಪ್ರಕಾರ ಮಂಗಳವಾರ (ಏ.13) ರಥೋತ್ಸವ ಬರುತ್ತದೆ. ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ರತೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ದೇವಾಲಯದ ಎದುರು ರಥವನ್ನು ತಂದು ನಿಲ್ಲಿಸಲಾಗಿದೆ.</p>.<p>ಈ ಬಗ್ಗೆ ಶನಿವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ: </strong>ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆ ಶನಿವಾರದಿಂದ (ಏ.10) ಆರಂಭವಾಗಲಿದ್ದು, ಕೋವಿಡ್ ಕಾರಣಕ್ಕೆ ಸರಳವಾಗಿ ನಡೆಯಲಿದೆ.</p>.<p>ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಸೇರಿದಂತೆ 200 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.</p>.<p>ನಾಲ್ಕು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕವಲ್ಲದೆ ತಮಿಳುನಾಡಿನ ಲಕ್ಷಾಂತರಭಕ್ತರು ಪ್ರತಿ ವರ್ಷ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷವೂ ಜಾತ್ರೆ ರದ್ದಾಗಿತ್ತು.</p>.<p>ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನದ ಸೇವೆ, ಭಾನುವಾರ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.</p>.<p>ಕೊನೆಯ ದಿನ ರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳುವುದು ವಾಡಿಕೆ. ಅದರ ಪ್ರಕಾರ ಮಂಗಳವಾರ (ಏ.13) ರಥೋತ್ಸವ ಬರುತ್ತದೆ. ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ರತೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ದೇವಾಲಯದ ಎದುರು ರಥವನ್ನು ತಂದು ನಿಲ್ಲಿಸಲಾಗಿದೆ.</p>.<p>ಈ ಬಗ್ಗೆ ಶನಿವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>