ಜಿಲ್ಲೆಯಲ್ಲಿ ಎದುರಾಗಿರುವ ತೀವ್ರ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಗೂಗಲ್ ಮೀಟ್ ಸಭೆಯಲ್ಲಿ ಮಾತನಾಡಿದ ಅವರು, ‘ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ನೀರಿನ ಸಮಸ್ಯೆ ಬಗ್ಗೆ ದೂರುಗಳು ಕಂಡುಬಂದರೆ ಆದ್ಯತೆ ಮೇರೆಗೆ ಪರಿಹರಿಸಬೇಕು. ಪೈಪ್ಲೈನ್ನಿಂದ ನೀರು ಅನಾವಶ್ಯಕವಾಗಿ ಪೋಲಾಗದಂತೆ ಎಚ್ಚರ ವಹಿಸಬೇಕು. ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಮುಂದಾಗಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ವಿಳಂಬ ಧೋರಣೆ ಸಲ್ಲದು. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಎಚ್ಚರಿಸಿದರು.