<p><strong>ಚಾಮರಾಜನಗರ</strong>: ಜಮೀನಿನ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕ ಪಕ್ಕದ ಜಮೀನುಗಳ ಮಾಲೀಕರ ನಡುವೆ ಘರ್ಷಣೆಯಲ್ಲಿ ಒಬ್ಬರ ಕೊಲೆಯಾಗಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.</p>.<p>ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ಗ್ರಾಮದ ಮಲೆ ಮಾದಪ್ಪ ಅವರು ಗುರುಸ್ವಾಮಿ (66) ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಗುರುಸ್ವಾಮಿ ಅವರ ಮಗ ಮಂಜುನಾಥ್ (28) ಅವರಿಗೂ ಗಂಭೀರ ಏಟಾಗಿದ್ದು, ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣದ ಸಂಬಂಧ ಮಲೆ ಮಾದಪ್ಪ, ಅವರ ಮಗ ಮಲ್ಲಿಕಾರ್ಜುನ ಹಾಗೂ ಪತ್ನಿ ಮಂಗಳಮ್ಮ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಸ್ವಾಮಿ ಅವರು ಜಿಲ್ಲಾ ಪಂಚಾಯಿತಿಯ ನಿಕಟಪೂರ್ವ ಉಪಾಧ್ಯಕ್ಷೆ ಶಶಿಕಲಾ ಅವರ ತಂದೆ.</p>.<p class="Subhead"><strong>ಘಟನೆಯ ವಿವರ: </strong>‘ಮಲೆ ಮಾದಪ್ಪ ಹಾಗೂ ಗುರುಸ್ವಾಮಿ ಅವರ ನಡುವೆ ಜಮೀನಿನಲ್ಲಿರುವ ಓಡಾಡುವ ದಾರಿ ವಿಚಾರವಾಗಿ 10 ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ಇತ್ತು. ಕಳೆದ ವರ್ಷವಷ್ಟೇ ಇಬ್ಬರೂ ಪರಸ್ಪರ ರಾಜಿ ಮಾಡಿಕೊಂಡಿದ್ದರು. ಮಂಗಳವಾರ ಮಲೆ ಮಾದಪ್ಪ ಹಾಗೂ ಅವರ ಮಗ ಮಲ್ಲಿಕಾರ್ಜುನ ಅವರು ಈ ದಾರಿಯಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸುತ್ತಿದ್ದರು. ಇದು ಗೊತ್ತಾಗುತ್ತಿದ್ದಂತೆಯೇ ಗುರುಸ್ವಾಮಿ ಹಾಗೂ ಮಂಜುನಾಥ್ ಅವರು ಸ್ಥಳಕ್ಕೆ ತೆರಳಿ ಮಲೆ ಮಾದಪ್ಪ ಅವರನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಮಲೆ ಮಾದಪ್ಪ ಅವರು ಮಚ್ಚಿನಿಂದ ಗುರುಸ್ವಾಮಿ ಹಾಗೂ ಮಂಜುನಾಥ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಗುರುಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಮಂಜುನಾಥ್ ಅವರ ತಲೆಗೆ ಹಾಗೂ ಕೈಗೆ ತೀವ್ರವಾಗಿ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ದ್ವೇಷದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಗೊತ್ತಾಗಿದೆ. ಗುರುಸ್ವಾಮಿ ಅವರ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು’ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ಎಸ್ಪಿ ದಿವ್ಯಾ ಸಾರಾ ಥಾಮಸ್, ಎಎಸ್ಪಿ ಸುಂದರ್ರಾಜ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಮೀನಿನ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕ ಪಕ್ಕದ ಜಮೀನುಗಳ ಮಾಲೀಕರ ನಡುವೆ ಘರ್ಷಣೆಯಲ್ಲಿ ಒಬ್ಬರ ಕೊಲೆಯಾಗಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.</p>.<p>ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ಗ್ರಾಮದ ಮಲೆ ಮಾದಪ್ಪ ಅವರು ಗುರುಸ್ವಾಮಿ (66) ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಗುರುಸ್ವಾಮಿ ಅವರ ಮಗ ಮಂಜುನಾಥ್ (28) ಅವರಿಗೂ ಗಂಭೀರ ಏಟಾಗಿದ್ದು, ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣದ ಸಂಬಂಧ ಮಲೆ ಮಾದಪ್ಪ, ಅವರ ಮಗ ಮಲ್ಲಿಕಾರ್ಜುನ ಹಾಗೂ ಪತ್ನಿ ಮಂಗಳಮ್ಮ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಸ್ವಾಮಿ ಅವರು ಜಿಲ್ಲಾ ಪಂಚಾಯಿತಿಯ ನಿಕಟಪೂರ್ವ ಉಪಾಧ್ಯಕ್ಷೆ ಶಶಿಕಲಾ ಅವರ ತಂದೆ.</p>.<p class="Subhead"><strong>ಘಟನೆಯ ವಿವರ: </strong>‘ಮಲೆ ಮಾದಪ್ಪ ಹಾಗೂ ಗುರುಸ್ವಾಮಿ ಅವರ ನಡುವೆ ಜಮೀನಿನಲ್ಲಿರುವ ಓಡಾಡುವ ದಾರಿ ವಿಚಾರವಾಗಿ 10 ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ಇತ್ತು. ಕಳೆದ ವರ್ಷವಷ್ಟೇ ಇಬ್ಬರೂ ಪರಸ್ಪರ ರಾಜಿ ಮಾಡಿಕೊಂಡಿದ್ದರು. ಮಂಗಳವಾರ ಮಲೆ ಮಾದಪ್ಪ ಹಾಗೂ ಅವರ ಮಗ ಮಲ್ಲಿಕಾರ್ಜುನ ಅವರು ಈ ದಾರಿಯಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸುತ್ತಿದ್ದರು. ಇದು ಗೊತ್ತಾಗುತ್ತಿದ್ದಂತೆಯೇ ಗುರುಸ್ವಾಮಿ ಹಾಗೂ ಮಂಜುನಾಥ್ ಅವರು ಸ್ಥಳಕ್ಕೆ ತೆರಳಿ ಮಲೆ ಮಾದಪ್ಪ ಅವರನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಮಲೆ ಮಾದಪ್ಪ ಅವರು ಮಚ್ಚಿನಿಂದ ಗುರುಸ್ವಾಮಿ ಹಾಗೂ ಮಂಜುನಾಥ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಗುರುಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಮಂಜುನಾಥ್ ಅವರ ತಲೆಗೆ ಹಾಗೂ ಕೈಗೆ ತೀವ್ರವಾಗಿ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ದ್ವೇಷದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಗೊತ್ತಾಗಿದೆ. ಗುರುಸ್ವಾಮಿ ಅವರ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು’ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ಎಸ್ಪಿ ದಿವ್ಯಾ ಸಾರಾ ಥಾಮಸ್, ಎಎಸ್ಪಿ ಸುಂದರ್ರಾಜ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>