<p><strong>ಚಾಮರಾಜನಗರ:</strong> ‘ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹದಂತಹ ಪ್ರಕರಣಗಳನ್ನು ತಡೆಯಲು ಹಲವು ಕಾನೂನುಗಳು ಜಾರಿಯಾಗಿವೆ. ಅವು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ ಜನರ ಸಹಕಾರ ಅಗತ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ನಂದೀಶ್ ಹೇಳಿದರು.</p>.<p>ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗುರುವಾರ ಓಪಿಡಿ ಸಂಸ್ಥೆ ಮೈಸೂರು, ಮಹಿಳೋದಯ ಮಹಿಳಾ ಒಕ್ಕೂಟದಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆಣ್ಣಿಗೆ ಹೆಣ್ಣೆ ವೈರಿಗಳಾಗಿದ್ದಾರೆ. ಲಿಂಗಪತ್ತೆ ಮಾಡಿಸಿ, ಗರ್ಭದಲ್ಲಿಯೆ ಹೆಣ್ಣು ಮಗುವನ್ನು ಕೊಲ್ಲುವ ಅಮಾನವೀಯ ಕೃತ್ಯ ನಡೆಯುತ್ತಲೆ ಬಂದಿದೆ. ಇದೇಲ್ಲ ನಿಲ್ಲಬೇಕಾದರೆ ಮಹಿಳೆಯರು ಜಾಗೃತರಾಗಬೇಕು ಎಂದು ತಿಳಿಸಿದರು.</p>.<p>ಸಾಧನೆ ಮಾಡಲು ದೊಡ್ಡ ಅಧಿಕಾರಿ ಗಳೇ ಆಗಬೇಕಿಲ್ಲ. ನಿಜ ಜೀವನದಲ್ಲಿಯು ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಮಹಿಳೆಯರು ಆಲೋಚಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್ಕುಮಾರ್ ಮಾತನಾಡಿ. ಮಹಿಳಾ ದಿನಾಚರಣೆ ಎಂದರೆ ಮಹಿಳೆ ಮತ್ತು ಪುರುಷರು ಸೇರಿ ಆಚರಿಸಬೇಕು. ಎಲ್ಲರ ಮನೋಭಾವನೆ ಬದಲಾಗಬೇಕು. ಕುಟುಂಬದಲ್ಲಿ ಮೇಲು, ಕೀಳು ಇರಬಾರದು. ಪೋಷಕರು ಗಂಡು, ಹೆಣ್ಣು ಇಬ್ಬರಲ್ಲೂ ಸಮಾನ ಪ್ರೀತಿ ತೋರಿಸಬೇಕು ಎಂದು ತಿಳಿಸಿದರು.</p>.<p>ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್.ಎಸ್. ಪ್ರೇಮಲತಾ ಮಾತನಾಡಿ, ಸುಸ್ತಿರ ಅಭಿವೃದ್ಧಿ ಮಹಿಳೆಯರಿಂದ ಸಾಧ್ಯ. ಮಹಿಳೆ ಅತಿ ಹೆಚ್ಚು ಕ್ರಿಯಾಶೀಲಳಾ ಗಿದ್ದು, ಅನಾದಿ ಕಾಲದಿಂದಂದಲೂ ಲಿಂಗ ಸಮಾನತೆ ಬಗ್ಗೆ ಹೋರಾಟ ಮಾಡುತ್ತಿದ್ದಾಳೆ ಎಂದರು.</p>.<p>ನಬಾರ್ಡ್ ಬ್ಯಾಂಕ್ನ ವ್ಯವಸ್ಥಾಪಕ ಜಗದೀಶ್, ಆರ್ಥಿಕ ಸಲಹೆಗಾರ ಶಂಕರ್, ಓಪಿಡಿ ಸಂಸ್ಥೆಯ ನಿರ್ದೇಶಕ ವಂದನೆಸ್ವಾಮಿ ಸ್ಟ್ಯಾನಿ ಡಿ. ಆಲ್ಮೇಡಾ, ಸಂಸ್ಥೆ ಸಂಯೋಜಕಿ ಸುನಿತಾ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಓಡಿಪಿ ನಾಗವಳ್ಳಿ ತಾಲ್ಲೂಕು ಅಧ್ಯಕ್ಷರಾದ ಆಶಾಲತಾ, ಶಿವಮ್ಮ, ತಾಲ್ಲೂಕು ಅಧ್ಯಕ್ಷೆ ದೇವಮ್ಮ, ವಲಯ ಸಂಯೋಜಕರು, ಕಾರ್ಯಕರ್ತರು ಹಾಗೂ ಸಿಬಂದ್ದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹದಂತಹ ಪ್ರಕರಣಗಳನ್ನು ತಡೆಯಲು ಹಲವು ಕಾನೂನುಗಳು ಜಾರಿಯಾಗಿವೆ. ಅವು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ ಜನರ ಸಹಕಾರ ಅಗತ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ನಂದೀಶ್ ಹೇಳಿದರು.</p>.<p>ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗುರುವಾರ ಓಪಿಡಿ ಸಂಸ್ಥೆ ಮೈಸೂರು, ಮಹಿಳೋದಯ ಮಹಿಳಾ ಒಕ್ಕೂಟದಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆಣ್ಣಿಗೆ ಹೆಣ್ಣೆ ವೈರಿಗಳಾಗಿದ್ದಾರೆ. ಲಿಂಗಪತ್ತೆ ಮಾಡಿಸಿ, ಗರ್ಭದಲ್ಲಿಯೆ ಹೆಣ್ಣು ಮಗುವನ್ನು ಕೊಲ್ಲುವ ಅಮಾನವೀಯ ಕೃತ್ಯ ನಡೆಯುತ್ತಲೆ ಬಂದಿದೆ. ಇದೇಲ್ಲ ನಿಲ್ಲಬೇಕಾದರೆ ಮಹಿಳೆಯರು ಜಾಗೃತರಾಗಬೇಕು ಎಂದು ತಿಳಿಸಿದರು.</p>.<p>ಸಾಧನೆ ಮಾಡಲು ದೊಡ್ಡ ಅಧಿಕಾರಿ ಗಳೇ ಆಗಬೇಕಿಲ್ಲ. ನಿಜ ಜೀವನದಲ್ಲಿಯು ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಮಹಿಳೆಯರು ಆಲೋಚಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್ಕುಮಾರ್ ಮಾತನಾಡಿ. ಮಹಿಳಾ ದಿನಾಚರಣೆ ಎಂದರೆ ಮಹಿಳೆ ಮತ್ತು ಪುರುಷರು ಸೇರಿ ಆಚರಿಸಬೇಕು. ಎಲ್ಲರ ಮನೋಭಾವನೆ ಬದಲಾಗಬೇಕು. ಕುಟುಂಬದಲ್ಲಿ ಮೇಲು, ಕೀಳು ಇರಬಾರದು. ಪೋಷಕರು ಗಂಡು, ಹೆಣ್ಣು ಇಬ್ಬರಲ್ಲೂ ಸಮಾನ ಪ್ರೀತಿ ತೋರಿಸಬೇಕು ಎಂದು ತಿಳಿಸಿದರು.</p>.<p>ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್.ಎಸ್. ಪ್ರೇಮಲತಾ ಮಾತನಾಡಿ, ಸುಸ್ತಿರ ಅಭಿವೃದ್ಧಿ ಮಹಿಳೆಯರಿಂದ ಸಾಧ್ಯ. ಮಹಿಳೆ ಅತಿ ಹೆಚ್ಚು ಕ್ರಿಯಾಶೀಲಳಾ ಗಿದ್ದು, ಅನಾದಿ ಕಾಲದಿಂದಂದಲೂ ಲಿಂಗ ಸಮಾನತೆ ಬಗ್ಗೆ ಹೋರಾಟ ಮಾಡುತ್ತಿದ್ದಾಳೆ ಎಂದರು.</p>.<p>ನಬಾರ್ಡ್ ಬ್ಯಾಂಕ್ನ ವ್ಯವಸ್ಥಾಪಕ ಜಗದೀಶ್, ಆರ್ಥಿಕ ಸಲಹೆಗಾರ ಶಂಕರ್, ಓಪಿಡಿ ಸಂಸ್ಥೆಯ ನಿರ್ದೇಶಕ ವಂದನೆಸ್ವಾಮಿ ಸ್ಟ್ಯಾನಿ ಡಿ. ಆಲ್ಮೇಡಾ, ಸಂಸ್ಥೆ ಸಂಯೋಜಕಿ ಸುನಿತಾ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಓಡಿಪಿ ನಾಗವಳ್ಳಿ ತಾಲ್ಲೂಕು ಅಧ್ಯಕ್ಷರಾದ ಆಶಾಲತಾ, ಶಿವಮ್ಮ, ತಾಲ್ಲೂಕು ಅಧ್ಯಕ್ಷೆ ದೇವಮ್ಮ, ವಲಯ ಸಂಯೋಜಕರು, ಕಾರ್ಯಕರ್ತರು ಹಾಗೂ ಸಿಬಂದ್ದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>