<p>ಚಾಮರಾಜನಗರ: ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಣೆಗೆ ತಾತ್ಕಾಲಿಕವಾಗಿ ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮಂಗಳವಾರ ನಡೆದ ನಗರಸಭೆಯ ವಿಶೇಷ ಸಭೆ ಒಪ್ಪಿಗೆ ನೀಡಿದೆ.<br /> <br /> ನಗರದ ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ವಿ.ಎಚ್. ಕೃಷ್ಣಮೂರ್ತಿ ಮಾತನಾಡಿ, `23 ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಲು 60 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು. <br /> <br /> ಲೋಕೋಪಯೋಗಿ ಇಲಾಖೆಯ ದರಸೂಚಿಯಂತೆ ಅವರನ್ನು ಸೇವೆಗೆ ನಿಯೋಜಿಸಿಕೊಳ್ಳಲಾಗಿತ್ತು~ ಎಂದರು.<br /> ಪ್ರಸ್ತುತ ಸರ್ಕಾರದ ಸುತ್ತೋಲೆ ಅನ್ವಯ ಭವಿಷ್ಯ ನಿಧಿ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಯನ್ನು ಪರಿಷ್ಕರಿಸಲಾಗಿದೆ. <br /> <br /> ಭವಿಷ್ಯ ನಿಧಿ ಹಾಗೂ ಕಾರ್ಮಿಕರ ಕಲ್ಯಾಣ ಭತ್ಯೆ ಪಾವತಿಸುವಂತೆ ಒತ್ತಾಯಿಸಿ ಗುತ್ತಿಗೆ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರು ನಗರಸಭೆಗೆ ತಿಳಿಸಿದ್ದಾರೆ. ಪೌರಾಡಳಿತ ನಿರ್ದೇಶನಾಲಯದ ಸೂಚನೆ ಮೇರೆಗೆ 76 ಲಕ್ಷ ರೂ ಮೊತ್ತದಡಿ 23 ವಾರ್ಡ್ಗಳಲ್ಲಿ ಹೊರಗುತ್ತಿಗೆ ಮೂಲಕ ಸ್ವಚ್ಛತಾ ಕಾರ್ಯ ನಿರ್ವಹಿಸಲು ಇ-ಪ್ರೊಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆಯಬೇಕಿದೆ. ಈಗ ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ತೊಂದರೆಯಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.<br /> <br /> `ಮೊದಲು ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಒತ್ತು ನೀಡಬೇಕು. ಇಲ್ಲ ವಾದರೆ ಕಲ್ಮಷ ವಾತಾವರಣ ಸೃಷ್ಟಿ ಯಾಗಿ ಜನರು ತೊಂದರೆ ಅನುಭವಿ ಸಬೇಕಾಗುತ್ತದೆ. ಹಾಲಿ ಗುತ್ತಿಗೆ ದಾರರಿಗೆ ಮನ್ನಣೆ ನೀಡಬಾರದು. ತಾತ್ಕಾಲಿಕವಾಗಿ ಕಾರ್ಮಿಕರನ್ನು ನೇಮಿಸಿಕೊಂಡು ಕಾರ್ಮಿಕ ಕಾಯ್ದೆ ಅನ್ವಯ ಸಂಬಳ ನೀಡಬೇಕು~ ಎಂದು ಸದಸ್ಯರು ಒತ್ತಾಯಿಸಿದರು.<br /> <br /> ಪೌರಾಯುಕ್ತ ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, `ಗುತ್ತಿಗೆ ಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಬೇಕಿದೆ. ಹೀಗಾಗಿ, ತಾತ್ಕಾಲಿಕವಾಗಿ ಕಾರ್ಮಿಕರನ್ನು ನೇಮಿಸಿಕೊಂಡು ಬಾಕಿ ಉಳಿದಿರುವ ಸ್ವಚ್ಛತಾ ಕಾರ್ಯವನ್ನು ಪೂರ್ಣಗೊಳಿಸಲಾಗುವುದು~ ಎಂದು ಸಭೆಗೆ ತಿಳಿಸಿದರು.<br /> <br /> ತೆರವು ಕಾರ್ಯಾಚರಣೆ: ಸದಸ್ಯ ಸುರೇಶ್ನಾಯಕ ಮಾತನಾಡಿ, `ಉದ್ಯಾನಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ, ಎರಡು ತಿಂಗಳು ಮಾತ್ರ ಕೆಲಸ ನಿರ್ವಹಿಸಿ ಸುಮ್ಮನಿದ್ದಾರೆ. <br /> <br /> ಗಿಡಗಳಿಗೆ ನೀರು ಸಿಂಪಡಿಸಲು ಸಮರ್ಪಕ ಪೈಪ್ಲೈನ್ ವ್ಯವಸ್ಥೆ ಇಲ್ಲ. ಗಿಡ ಕತ್ತರಿಸುವ ಸಲಕರಣೆಯೂ ಇಲ್ಲ. ಹೀಗಾದರೆ ಕಾರ್ಮಿಕರು ಕೆಲಸ ನಿರ್ವಹಿ ಸುವುದಾದರೂ ಹೇಗೆ? ಎಂದ ಅವರು, ನಗರದ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು. <br /> <br /> ಪೌರಾಯುಕ್ತ ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, `ಪೊಲೀಸರ ರಕ್ಷಣೆಯೊಂದಿಗೆ ಶೀಘ್ರವೇ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಣೆಗೆ ತಾತ್ಕಾಲಿಕವಾಗಿ ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮಂಗಳವಾರ ನಡೆದ ನಗರಸಭೆಯ ವಿಶೇಷ ಸಭೆ ಒಪ್ಪಿಗೆ ನೀಡಿದೆ.<br /> <br /> ನಗರದ ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ವಿ.ಎಚ್. ಕೃಷ್ಣಮೂರ್ತಿ ಮಾತನಾಡಿ, `23 ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಲು 60 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು. <br /> <br /> ಲೋಕೋಪಯೋಗಿ ಇಲಾಖೆಯ ದರಸೂಚಿಯಂತೆ ಅವರನ್ನು ಸೇವೆಗೆ ನಿಯೋಜಿಸಿಕೊಳ್ಳಲಾಗಿತ್ತು~ ಎಂದರು.<br /> ಪ್ರಸ್ತುತ ಸರ್ಕಾರದ ಸುತ್ತೋಲೆ ಅನ್ವಯ ಭವಿಷ್ಯ ನಿಧಿ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಯನ್ನು ಪರಿಷ್ಕರಿಸಲಾಗಿದೆ. <br /> <br /> ಭವಿಷ್ಯ ನಿಧಿ ಹಾಗೂ ಕಾರ್ಮಿಕರ ಕಲ್ಯಾಣ ಭತ್ಯೆ ಪಾವತಿಸುವಂತೆ ಒತ್ತಾಯಿಸಿ ಗುತ್ತಿಗೆ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರು ನಗರಸಭೆಗೆ ತಿಳಿಸಿದ್ದಾರೆ. ಪೌರಾಡಳಿತ ನಿರ್ದೇಶನಾಲಯದ ಸೂಚನೆ ಮೇರೆಗೆ 76 ಲಕ್ಷ ರೂ ಮೊತ್ತದಡಿ 23 ವಾರ್ಡ್ಗಳಲ್ಲಿ ಹೊರಗುತ್ತಿಗೆ ಮೂಲಕ ಸ್ವಚ್ಛತಾ ಕಾರ್ಯ ನಿರ್ವಹಿಸಲು ಇ-ಪ್ರೊಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆಯಬೇಕಿದೆ. ಈಗ ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ತೊಂದರೆಯಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.<br /> <br /> `ಮೊದಲು ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಒತ್ತು ನೀಡಬೇಕು. ಇಲ್ಲ ವಾದರೆ ಕಲ್ಮಷ ವಾತಾವರಣ ಸೃಷ್ಟಿ ಯಾಗಿ ಜನರು ತೊಂದರೆ ಅನುಭವಿ ಸಬೇಕಾಗುತ್ತದೆ. ಹಾಲಿ ಗುತ್ತಿಗೆ ದಾರರಿಗೆ ಮನ್ನಣೆ ನೀಡಬಾರದು. ತಾತ್ಕಾಲಿಕವಾಗಿ ಕಾರ್ಮಿಕರನ್ನು ನೇಮಿಸಿಕೊಂಡು ಕಾರ್ಮಿಕ ಕಾಯ್ದೆ ಅನ್ವಯ ಸಂಬಳ ನೀಡಬೇಕು~ ಎಂದು ಸದಸ್ಯರು ಒತ್ತಾಯಿಸಿದರು.<br /> <br /> ಪೌರಾಯುಕ್ತ ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, `ಗುತ್ತಿಗೆ ಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಬೇಕಿದೆ. ಹೀಗಾಗಿ, ತಾತ್ಕಾಲಿಕವಾಗಿ ಕಾರ್ಮಿಕರನ್ನು ನೇಮಿಸಿಕೊಂಡು ಬಾಕಿ ಉಳಿದಿರುವ ಸ್ವಚ್ಛತಾ ಕಾರ್ಯವನ್ನು ಪೂರ್ಣಗೊಳಿಸಲಾಗುವುದು~ ಎಂದು ಸಭೆಗೆ ತಿಳಿಸಿದರು.<br /> <br /> ತೆರವು ಕಾರ್ಯಾಚರಣೆ: ಸದಸ್ಯ ಸುರೇಶ್ನಾಯಕ ಮಾತನಾಡಿ, `ಉದ್ಯಾನಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ, ಎರಡು ತಿಂಗಳು ಮಾತ್ರ ಕೆಲಸ ನಿರ್ವಹಿಸಿ ಸುಮ್ಮನಿದ್ದಾರೆ. <br /> <br /> ಗಿಡಗಳಿಗೆ ನೀರು ಸಿಂಪಡಿಸಲು ಸಮರ್ಪಕ ಪೈಪ್ಲೈನ್ ವ್ಯವಸ್ಥೆ ಇಲ್ಲ. ಗಿಡ ಕತ್ತರಿಸುವ ಸಲಕರಣೆಯೂ ಇಲ್ಲ. ಹೀಗಾದರೆ ಕಾರ್ಮಿಕರು ಕೆಲಸ ನಿರ್ವಹಿ ಸುವುದಾದರೂ ಹೇಗೆ? ಎಂದ ಅವರು, ನಗರದ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು. <br /> <br /> ಪೌರಾಯುಕ್ತ ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, `ಪೊಲೀಸರ ರಕ್ಷಣೆಯೊಂದಿಗೆ ಶೀಘ್ರವೇ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>