ಚುನಾವಣಾ ಸಂಬಂಧ ತರಬೇತಿ ನೀಡಿದ ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಮಾತನಾಡಿ, ಚುನಾವಣೆ ಕೆಲಸಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಚುನಾವಣಾ ಸಂಬಂಧ ಸಮರ್ಪಕ ಮಾಹಿತಿ ಹೊಂದಿರಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಉತ್ತಮ ಸಮನ್ವಯದೊಂದಿಗೆ ನಿಯೋಜಿಸ ಲಾಗಿರುವ ಕೆಲಸವನ್ನು ಆಯಾ ಸಂದರ್ಭ ದಲ್ಲೇ ನಿರ್ವಹಿಸಬೇಕು ಎಂದರು.