<p>ಕೊಳ್ಳೇಗಾಲ: ಒಂದೆಡೆ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದೆ. ಗ್ರಾಮದಲ್ಲಿ ಬಹಳ ವರ್ಷಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಜತೆಗೆ ಗ್ರಾಮದ ರಸ್ತೆಗಳು ದೊಡ್ಡದೊಡ್ಡ ಗುಂಡಿಗಳಿಂದ ಕಲ್ಲುಗಳಿಂದ ತುಂಬಿ ಹೋಗಿದೆ.<br /> <br /> ಹೊಂಡರಬಾಳು ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಜಕ್ಕಳ್ಳಿ ಗ್ರಾಮದಲ್ಲಿ ಈ ಸಮಸ್ಯೆ ಜನರನ್ನು ಕಾಡುತ್ತಿದೆ. ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿರುವ ಈ ಗ್ರಾಮ ಗುಡ್ಡಗಾಡು ಪ್ರದೇಶವನ್ನು ಒಳಗೊಂಡಿದೆ. ಕುಡಿಯುವ ನೀರು ಪೂರೈಸುವ ಸಲುವಾಗಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಲಕ್ಷಾಂತರ ರೂ. ಖರ್ಚುಮಾಡಿ ಒವರ್ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಎತ್ತರದ ಪ್ರದೇಶದಲ್ಲಿ ನಿರ್ಮಿಸಿರುವ ಈ ಟ್ಯಾಂಕ್ಗೆ ಕೊಳವೆಬಾವಿ ಮೂಲಕ ನೀರು ಪೂರೈಸಲು ಸಾಧ್ಯವಾಗದೆ ನಿರ್ಮಾಣಗೊಂಡ ದಿನದಿಂದಲೂ ಜನತೆಯ ಉಪಯೋಗಕ್ಕೆ ಬಾರದೆ ಸ್ಮಾರಕದಂತಿದೆ.<br /> <br /> ಈ ಭಾಗದಲ್ಲಿನ ಎಲ್ಲಾ ಬೋರ್ವೆಲ್ಗಳಲ್ಲಿ ಅಂತರ್ಜಲ ಕುಸಿತದ ಪರಿಣಾಮ ನೀರು ಬರುತ್ತಿಲ್ಲ. ನೀರು ಇಲ್ಲದೆ ಕೈಪಂಪುಗಳು ದೂಳುಹಿಡಿಯುವಂತಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ.<br /> <br /> ಗ್ರಾಮದ ಜನತೆಯ ನೀರಿನ ಬರಣೆ ಅರಿತು ಗ್ರಾಮದ ಬಳಿಯ ಕೋಟೆಕೆರೆ ಬಳಿ ಕೊಳವೆಬಾವಿ ಕೊರೆಸಿ ಅಲ್ಲಿಂದ ಪೈಪ್ಲೈನ್ ಅಳವಡಿಸಿ ಮುಖ್ಯರಸ್ತೆಯಲ್ಲಿ ಒಂದೆರಡು ನಲ್ಲಿಗಳಲ್ಲಿ ಮಾತ್ರ ಅಲ್ಪಪ್ರಮಾಣದ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಟ್ಯಾಂಕ್ಗೆ ಪೂರೈಕೆಯಾಗದ ಕಾರಣ ಗುಡ್ಡದ ಮೇಲಿನ ಮಹಿಳೆಯರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಮಹಿಳೆಯರು, ಮಕ್ಕಳು ನಿತ್ಯವೂ ಬಿಂದಿಗೆ ಹಿಡಿದು ಕುಡಿಯುವ ನೀರಿಗಾಗಿ ಕೃಷಿ ಪಂಪ್ಸೆಟ್ಗಳತ್ತ ಹೋಗುತ್ತಿದ್ದಾರೆ. ಆದರೆ, ಆಗಾಗ ವಿದ್ಯುತ್ ವ್ಯತ್ಯಯ ಆಗುವುದರಿಂದ ನೀರು ಸಂಗ್ರಹಿಸಲು ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಗ್ರಾಮದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಮುಂದಾಗದ ಕಾರಣ ರಸ್ತೆಗಳಲ್ಲಿ ಗಿಡಗಂಡೆಗಳು ಬೆಳೆದು ನಿಂತು ವಿಷಜಂತುಗಳ ಆವಾಸಸ್ಥಾನವಾಗಿದೆ. ಜನರು ರಾತ್ರಿ ವೇಳೆ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ರಸ್ತೆಗಳು ಕಲ್ಲುಗಳಿಂದ ಹಾಗೂ ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಗಳಲ್ಲಿ ವಾಹನ ಸಂಚಾರ ಸಾಧ್ಯವೇ ಇಲ್ಲ. ಜನರು ಈ ರಸ್ತೆಯಲ್ಲಿ ಓಡಾಡಲೂ ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಈ ಗ್ರಾಮದ ಬಡಾವಣೆಗಳ ರಸ್ತೆ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿಲ್ಲ.<br /> <br /> ಗ್ರಾಮದಲ್ಲಿ ಅನೇಕ ಬೀದಿಗಳಲ್ಲಿ ಚರಂಡಿಗಳನ್ನೇ ನಿರ್ಮಿಸಿಲ್ಲ. ಮಳೆಗಾಲದಲ್ಲಿ ರಸ್ತೆಯಲ್ಲಿ ಹರಿಯುವ ನೀರು ಮನೆಯೊಳಗೆ ನುಗ್ಗಿ ಜನರು ತೊಂದರೆಪಡುವ ಸ್ಥಿತಿ ಇದೆ.<br /> <br /> ಗ್ರಾಮದ ಜನತೆಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಪೂರೈಕೆ, ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಈವರೆಗೂ ಮುಂದಾಗದಿರುವ ಕ್ರಮವನ್ನು ರೈತ ಸಂಘದ ಮುಖಂಡ ಶೈಲೇಂದ್ರ ಖಂಡಿಸಿದ್ದಾರೆ.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಗ್ರಾಮಕ್ಕೆ ಖುದ್ದಾಗಿ ಭೆೇಟಿ ನೀಡಿ ಇಲ್ಲಿನ ಜನತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರುಗಳಾದ ಮುತ್ತು, ಪೆರಿಯನಾಯಗಂ, ಕೆಂಪರಾಜು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಒಂದೆಡೆ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದೆ. ಗ್ರಾಮದಲ್ಲಿ ಬಹಳ ವರ್ಷಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಜತೆಗೆ ಗ್ರಾಮದ ರಸ್ತೆಗಳು ದೊಡ್ಡದೊಡ್ಡ ಗುಂಡಿಗಳಿಂದ ಕಲ್ಲುಗಳಿಂದ ತುಂಬಿ ಹೋಗಿದೆ.<br /> <br /> ಹೊಂಡರಬಾಳು ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಜಕ್ಕಳ್ಳಿ ಗ್ರಾಮದಲ್ಲಿ ಈ ಸಮಸ್ಯೆ ಜನರನ್ನು ಕಾಡುತ್ತಿದೆ. ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿರುವ ಈ ಗ್ರಾಮ ಗುಡ್ಡಗಾಡು ಪ್ರದೇಶವನ್ನು ಒಳಗೊಂಡಿದೆ. ಕುಡಿಯುವ ನೀರು ಪೂರೈಸುವ ಸಲುವಾಗಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಲಕ್ಷಾಂತರ ರೂ. ಖರ್ಚುಮಾಡಿ ಒವರ್ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಎತ್ತರದ ಪ್ರದೇಶದಲ್ಲಿ ನಿರ್ಮಿಸಿರುವ ಈ ಟ್ಯಾಂಕ್ಗೆ ಕೊಳವೆಬಾವಿ ಮೂಲಕ ನೀರು ಪೂರೈಸಲು ಸಾಧ್ಯವಾಗದೆ ನಿರ್ಮಾಣಗೊಂಡ ದಿನದಿಂದಲೂ ಜನತೆಯ ಉಪಯೋಗಕ್ಕೆ ಬಾರದೆ ಸ್ಮಾರಕದಂತಿದೆ.<br /> <br /> ಈ ಭಾಗದಲ್ಲಿನ ಎಲ್ಲಾ ಬೋರ್ವೆಲ್ಗಳಲ್ಲಿ ಅಂತರ್ಜಲ ಕುಸಿತದ ಪರಿಣಾಮ ನೀರು ಬರುತ್ತಿಲ್ಲ. ನೀರು ಇಲ್ಲದೆ ಕೈಪಂಪುಗಳು ದೂಳುಹಿಡಿಯುವಂತಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ.<br /> <br /> ಗ್ರಾಮದ ಜನತೆಯ ನೀರಿನ ಬರಣೆ ಅರಿತು ಗ್ರಾಮದ ಬಳಿಯ ಕೋಟೆಕೆರೆ ಬಳಿ ಕೊಳವೆಬಾವಿ ಕೊರೆಸಿ ಅಲ್ಲಿಂದ ಪೈಪ್ಲೈನ್ ಅಳವಡಿಸಿ ಮುಖ್ಯರಸ್ತೆಯಲ್ಲಿ ಒಂದೆರಡು ನಲ್ಲಿಗಳಲ್ಲಿ ಮಾತ್ರ ಅಲ್ಪಪ್ರಮಾಣದ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಟ್ಯಾಂಕ್ಗೆ ಪೂರೈಕೆಯಾಗದ ಕಾರಣ ಗುಡ್ಡದ ಮೇಲಿನ ಮಹಿಳೆಯರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಮಹಿಳೆಯರು, ಮಕ್ಕಳು ನಿತ್ಯವೂ ಬಿಂದಿಗೆ ಹಿಡಿದು ಕುಡಿಯುವ ನೀರಿಗಾಗಿ ಕೃಷಿ ಪಂಪ್ಸೆಟ್ಗಳತ್ತ ಹೋಗುತ್ತಿದ್ದಾರೆ. ಆದರೆ, ಆಗಾಗ ವಿದ್ಯುತ್ ವ್ಯತ್ಯಯ ಆಗುವುದರಿಂದ ನೀರು ಸಂಗ್ರಹಿಸಲು ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಗ್ರಾಮದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಮುಂದಾಗದ ಕಾರಣ ರಸ್ತೆಗಳಲ್ಲಿ ಗಿಡಗಂಡೆಗಳು ಬೆಳೆದು ನಿಂತು ವಿಷಜಂತುಗಳ ಆವಾಸಸ್ಥಾನವಾಗಿದೆ. ಜನರು ರಾತ್ರಿ ವೇಳೆ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ರಸ್ತೆಗಳು ಕಲ್ಲುಗಳಿಂದ ಹಾಗೂ ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಗಳಲ್ಲಿ ವಾಹನ ಸಂಚಾರ ಸಾಧ್ಯವೇ ಇಲ್ಲ. ಜನರು ಈ ರಸ್ತೆಯಲ್ಲಿ ಓಡಾಡಲೂ ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಈ ಗ್ರಾಮದ ಬಡಾವಣೆಗಳ ರಸ್ತೆ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿಲ್ಲ.<br /> <br /> ಗ್ರಾಮದಲ್ಲಿ ಅನೇಕ ಬೀದಿಗಳಲ್ಲಿ ಚರಂಡಿಗಳನ್ನೇ ನಿರ್ಮಿಸಿಲ್ಲ. ಮಳೆಗಾಲದಲ್ಲಿ ರಸ್ತೆಯಲ್ಲಿ ಹರಿಯುವ ನೀರು ಮನೆಯೊಳಗೆ ನುಗ್ಗಿ ಜನರು ತೊಂದರೆಪಡುವ ಸ್ಥಿತಿ ಇದೆ.<br /> <br /> ಗ್ರಾಮದ ಜನತೆಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಪೂರೈಕೆ, ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಈವರೆಗೂ ಮುಂದಾಗದಿರುವ ಕ್ರಮವನ್ನು ರೈತ ಸಂಘದ ಮುಖಂಡ ಶೈಲೇಂದ್ರ ಖಂಡಿಸಿದ್ದಾರೆ.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಗ್ರಾಮಕ್ಕೆ ಖುದ್ದಾಗಿ ಭೆೇಟಿ ನೀಡಿ ಇಲ್ಲಿನ ಜನತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರುಗಳಾದ ಮುತ್ತು, ಪೆರಿಯನಾಯಗಂ, ಕೆಂಪರಾಜು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>