<p>ಸಂತೇಮರಹಳ್ಳಿ: ಇಲ್ಲಿನ ವಿದ್ಯುತ್ ಪ್ರಸರಣ ನಿಗಮದ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಹೋಬಳಿ ವ್ಯಾಪ್ತಿಯ 60 ಹಳ್ಳಿಯ ಜನರು ಬುಧವಾರ ರಾತ್ರಿ ಕತ್ತಲೆಯಲ್ಲಿ ಕಳೆಯುವಂತಾಯಿತು. <br /> <br /> ವಿದ್ಯುತ್ ಪ್ರಸರಣ ನಿಗಮದ ಘಟಕಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯ 220 ಕೆವಿ ಮುಖ್ಯ ಘಟಕದಿಂದ ವಿದ್ಯುತ್ ಸರಬರಾಜಾಗುತ್ತಿದೆ. ತಾಂತ್ರಿಕ ದೋಷದ ಪರಿಣಾಮ ಪೂರೈಕೆ ಸ್ಥಗಿತಗೊಂಡಿತು. ಸಕಾಲದಲ್ಲಿ ಸೆಸ್ಕ್ನ ಅಧಿಕಾರಿಗಳು ದುರಸ್ತಿಗೂ ಮುಂದಾಗಲಿಲ್ಲ. <br /> <br /> ಇದರ ಪರಿಣಾಮ ಸಂತೇಮರಹಳ್ಳಿ ಘಟಕದಿಂದ ಪೂರೈಕೆಯಾಗುವ ಆಲ್ದೂರು, ನವಿಲೂರು, ಕೆಂಪನಪುರ, ಮಂಗಲ ನೀರು ಶುದ್ಧೀಕರಣ ಘಟಕ, ಚುಂಗಡಿಪುರ, ಹೊನ್ನೂರು, ಅಂಬಳೆ ಫೀಡರ್ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಇದರಿಂದ ನಾಗರಿಕರು ತೀವ್ರ ಸಂಕಷ್ಟ ಅನುಭವಿಸಿದರು.<br /> <br /> ಹೋಬಳಿ ಕೇಂದ್ರದಲ್ಲಿರುವ ನೆಮ್ಮದಿ ಕೇಂದ್ರದ ಮುಂಭಾಗ ಗುರುವಾರ ಬೆಳಿಗ್ಗೆ ಜಾತಿ ಪ್ರಮಾಣಪತ್ರ ಪಡೆಯಲು ವಿವಿಧ ಗ್ರಾಮದ ವಿದ್ಯಾರ್ಥಿಗಳು ಜಮಾಯಿಸಿದ್ದರು. ವಿದ್ಯುತ್ ಇಲ್ಲದ ಪರಿಣಾಮ ಅನಿವಾರ್ಯವಾಗಿ ಕಾಯುವಂತಾಯಿತು. <br /> <br /> ಶಿವನಸಮುದ್ರದ ಕೆಪಿಟಿಸಿಎಲ್ ವಿಭಾಗದ ಸಿಬ್ಬಂದಿ ತಾಂತ್ರಿಕ ದೋಷವನ್ನು ಸರಿಪಡಿಸಿದರು. ಹೀಗಾಗಿ, ಮಧ್ಯಾಹ್ನ 12ಗಂಟೆಗೆ ವಿದ್ಯುತ್ ಪೂರೈಕೆಗೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಇಲ್ಲಿನ ವಿದ್ಯುತ್ ಪ್ರಸರಣ ನಿಗಮದ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಹೋಬಳಿ ವ್ಯಾಪ್ತಿಯ 60 ಹಳ್ಳಿಯ ಜನರು ಬುಧವಾರ ರಾತ್ರಿ ಕತ್ತಲೆಯಲ್ಲಿ ಕಳೆಯುವಂತಾಯಿತು. <br /> <br /> ವಿದ್ಯುತ್ ಪ್ರಸರಣ ನಿಗಮದ ಘಟಕಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯ 220 ಕೆವಿ ಮುಖ್ಯ ಘಟಕದಿಂದ ವಿದ್ಯುತ್ ಸರಬರಾಜಾಗುತ್ತಿದೆ. ತಾಂತ್ರಿಕ ದೋಷದ ಪರಿಣಾಮ ಪೂರೈಕೆ ಸ್ಥಗಿತಗೊಂಡಿತು. ಸಕಾಲದಲ್ಲಿ ಸೆಸ್ಕ್ನ ಅಧಿಕಾರಿಗಳು ದುರಸ್ತಿಗೂ ಮುಂದಾಗಲಿಲ್ಲ. <br /> <br /> ಇದರ ಪರಿಣಾಮ ಸಂತೇಮರಹಳ್ಳಿ ಘಟಕದಿಂದ ಪೂರೈಕೆಯಾಗುವ ಆಲ್ದೂರು, ನವಿಲೂರು, ಕೆಂಪನಪುರ, ಮಂಗಲ ನೀರು ಶುದ್ಧೀಕರಣ ಘಟಕ, ಚುಂಗಡಿಪುರ, ಹೊನ್ನೂರು, ಅಂಬಳೆ ಫೀಡರ್ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಇದರಿಂದ ನಾಗರಿಕರು ತೀವ್ರ ಸಂಕಷ್ಟ ಅನುಭವಿಸಿದರು.<br /> <br /> ಹೋಬಳಿ ಕೇಂದ್ರದಲ್ಲಿರುವ ನೆಮ್ಮದಿ ಕೇಂದ್ರದ ಮುಂಭಾಗ ಗುರುವಾರ ಬೆಳಿಗ್ಗೆ ಜಾತಿ ಪ್ರಮಾಣಪತ್ರ ಪಡೆಯಲು ವಿವಿಧ ಗ್ರಾಮದ ವಿದ್ಯಾರ್ಥಿಗಳು ಜಮಾಯಿಸಿದ್ದರು. ವಿದ್ಯುತ್ ಇಲ್ಲದ ಪರಿಣಾಮ ಅನಿವಾರ್ಯವಾಗಿ ಕಾಯುವಂತಾಯಿತು. <br /> <br /> ಶಿವನಸಮುದ್ರದ ಕೆಪಿಟಿಸಿಎಲ್ ವಿಭಾಗದ ಸಿಬ್ಬಂದಿ ತಾಂತ್ರಿಕ ದೋಷವನ್ನು ಸರಿಪಡಿಸಿದರು. ಹೀಗಾಗಿ, ಮಧ್ಯಾಹ್ನ 12ಗಂಟೆಗೆ ವಿದ್ಯುತ್ ಪೂರೈಕೆಗೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>