<p><strong>ಚಾಮರಾಜನಗರ: </strong>ಆನೆ ದಂತ ಸಾಗಿಸುತ್ತಿದ್ದ ವೇಳೆ ಅರಣ್ಯ ಸಂಚಾರ ದಳದ ಸಿಬ್ಬಂದಿ ದಾಳಿ ನಡೆಸಿ ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> ತಮಿಳುನಾಡಿಗೆ ಸೇರಿದ ತಾಳವಾಡಿ ಫಿರ್ಕಾದ ಗಾಜನೂರು ಗ್ರಾಮದ ವೆಂಕಟರಾಮು ಹಾಗೂ ಈರೋಡ್ನ ಮಹಮ್ಮದ್ ವಾಯ್ಸ ಬಂಧಿತರು.<br /> ಈ ಇಬ್ಬರು ಆರೋಪಿಗಳು ತಾಳವಾಡಿ ಕಡೆಯಿಂದ ಚಾಮರಾಜನಗರಕ್ಕೆ ಬೈಕ್ನಲ್ಲಿ ಆನೆ ದಂತ ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿದೆ. ಈ ಮಾಹಿತಿ ಮೇರೆಗೆ ಬೆಂಗಳೂರಿನ ಸಿಐಡಿ ಅರಣ್ಯ ಸಂಚಾರ ಘಟಕದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಲಕ್ಷ್ಮೀನರಸಿಂಹಯ್ಯ ನಗರಕ್ಕೆ ಆಗಮಿಸಿದ್ದಾರೆ.<br /> <br /> ಇಲ್ಲಿನ ಅರಣ್ಯ ಸಂಚಾರ ಘಟಕದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಚಿಕ್ಕಸಿದ್ದಯ್ಯ ಹಾಗೂ ಸಿಬ್ಬಂದಿ ವೆಂಕಟಯ್ಯನಛತ್ರದ ಗೇಟ್ ಬಳಿ ಕಾದುಕುಳಿತಿದ್ದಾರೆ.<br /> ಆರೋಪಿಗಳು ಬೈಕ್ನಲ್ಲಿ ಬಂದ ವೇಳೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿತರ ಬಳಿ ಇದ್ದ ಒಂದು ಆನೆ ದಂತ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.<br /> <br /> ಈ ಸಂಬಂಧ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಆನೆ ದಂತ ಸಾಗಿಸುತ್ತಿದ್ದ ವೇಳೆ ಅರಣ್ಯ ಸಂಚಾರ ದಳದ ಸಿಬ್ಬಂದಿ ದಾಳಿ ನಡೆಸಿ ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> ತಮಿಳುನಾಡಿಗೆ ಸೇರಿದ ತಾಳವಾಡಿ ಫಿರ್ಕಾದ ಗಾಜನೂರು ಗ್ರಾಮದ ವೆಂಕಟರಾಮು ಹಾಗೂ ಈರೋಡ್ನ ಮಹಮ್ಮದ್ ವಾಯ್ಸ ಬಂಧಿತರು.<br /> ಈ ಇಬ್ಬರು ಆರೋಪಿಗಳು ತಾಳವಾಡಿ ಕಡೆಯಿಂದ ಚಾಮರಾಜನಗರಕ್ಕೆ ಬೈಕ್ನಲ್ಲಿ ಆನೆ ದಂತ ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿದೆ. ಈ ಮಾಹಿತಿ ಮೇರೆಗೆ ಬೆಂಗಳೂರಿನ ಸಿಐಡಿ ಅರಣ್ಯ ಸಂಚಾರ ಘಟಕದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಲಕ್ಷ್ಮೀನರಸಿಂಹಯ್ಯ ನಗರಕ್ಕೆ ಆಗಮಿಸಿದ್ದಾರೆ.<br /> <br /> ಇಲ್ಲಿನ ಅರಣ್ಯ ಸಂಚಾರ ಘಟಕದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಚಿಕ್ಕಸಿದ್ದಯ್ಯ ಹಾಗೂ ಸಿಬ್ಬಂದಿ ವೆಂಕಟಯ್ಯನಛತ್ರದ ಗೇಟ್ ಬಳಿ ಕಾದುಕುಳಿತಿದ್ದಾರೆ.<br /> ಆರೋಪಿಗಳು ಬೈಕ್ನಲ್ಲಿ ಬಂದ ವೇಳೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿತರ ಬಳಿ ಇದ್ದ ಒಂದು ಆನೆ ದಂತ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.<br /> <br /> ಈ ಸಂಬಂಧ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>