ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶೆಡ್ ನಿರ್ಮಿಸಲಾಗಿದೆ. ಆದರೆ, ಬಿಸಿಲಿನ ಝಳದಿಂದ ಬಸವಳಿದ ಭಕ್ತರು ನೆರಳಿಗಾಗಿ ಇಲ್ಲಿಗೆ ಬಂದರೆ ನೆಮ್ಮದಿಗಿಂತ ಕಿರಿಕಿರಿ ಹೆಚ್ಚು. ಮಳೆಗಾಲದಲ್ಲಿ ಇಲ್ಲಿಗೆ ಬರಲು ಸಾಧ್ಯವಾಗುವುದಿಲ್ಲ. ಒಳಚರಂಡಿ ವ್ಯವಸ್ಥೆ ಇದ್ದರೂ, ಮಳೆ ನೀರು ಹೋಗಲು ಚರಂಡಿಗೆ ಸಂಪರ್ಕ ಕಲ್ಪಿಸಿಲ್ಲ. ಅಲ್ಲದೆ, ಶೆಡ್ನ ತಳಭಾಗದಲ್ಲಿ ಹಾಕಿರುವ ಕಾಂಕ್ರೀಟ್ನ ಹೊದಿಕೆ ಕಳಪೆ ಗುಣಮಟ್ಟದಿಂದ ಕೂಡಿದೆ. ಮುಂಗಾರುಮಳೆ ಚುರುಕುಗೊಂಡಿದ್ದು, ಮತ್ತಷ್ಟು ಅವ್ಯವಸ್ಥೆ ಆಗುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತು ಸಮಸ್ಯೆ ಬಗೆಹರಿಸಬೇಕು ಎಂದು ಮಹೇಶ್ ಆಗ್ರಹಿಸಿದರು.