ಗಗನಚುಕ್ಕಿ, ಭರಚುಕ್ಕಿ ಜಲಪಾತದಲ್ಲಿ ನೀರು ಹೆಚ್ಚಾದ ನಂತರ ಈ ವರ್ಷ `ಜಲಪಾತ ಉತ್ಸವ'ವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪಟ್ಟಣದ ಡಾ.ರಾಜ್ಕುಮಾರ್ ಮತ್ತು ಅಂಬೇಡ್ಕರ್ ರಸ್ತೆ ಅಗಲೀಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಲಿರುವುದಾಗಿ ಅವರು ತಿಳಿಸಿದರು. ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಂಜೇಗೌಡ, ವೀರಶೈವ ಮಹಾಸಭಾ ಕೊಳ್ಳೇಗಾಲ ಘಟಕ ಅಧ್ಯಕ್ಷ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಶಿವಕುಮಾರ್, ನಂಜುಂಡಸ್ವಾಮಿ, ಮುಡಿಗುಂಡ ಶಾಂತರಾಜು ಇದ್ದರು.