<p><span style="font-size: 26px;">ಚಿಂತಾಮಣಿ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ತಾಲ್ಲೂಕಿನ ಮುದ್ದುಲಹಳ್ಳಿ ಗ್ರಾಮದ ನೂರಾರು ನಾಗರಿಕರು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.</span></p>.<p>ನಂದಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದುಲಹಳ್ಳಿಯಲ್ಲಿ ಕೆಲ ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಅನೇಕ ಬಾರಿ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದಾಗಲೆಲ್ಲಾ ಸಮಸ್ಯೆ ಬಗೆಹರಿಸುವ ಭರವಸೆ ನೀಡುತ್ತಾರೆ. ಆದರೆ ಈವರೆಗೂ ಯಾವುದೇ ಭರವಸೆ ಈಡೇರಿಲ್ಲ. ಗ್ರಾಮದಲ್ಲಿ 2 ನೀರಿನ ಟ್ಯಾಂಕ್ಗಳಿವೆ. ಒಂದು ಟ್ಯಾಂಕ್ ನಿರ್ಮಾಣ ಹಂತದಲ್ಲಿದೆ. ಹಳ್ಳಿಗರಿಗೆ ನೀರು ಕೊಡುವುದಕ್ಕಿಂತ ಹಣ ಮಾಡುವುದೇ ಅಧಿಕಾರಿಗಳ ಉದ್ದೇಶವಾಗಿದೆ ಎಂದು ಆರೋಪಿಸಿದರು.<br /> <br /> ಗ್ರಾಮದಲ್ಲಿ 340 ಕುಟುಂಬಗಳಿದ್ದು, 3200 ಮಂದಿ ಜನಸಂಖ್ಯೆಯಿದೆ. ಜನ ಮತ್ತು ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ. ಪಂಚಾಯಿತಿ ವತಿಯಿಂದ ದಿನಕ್ಕೆ 2 ಟ್ಯಾಂಕರ್ ನೀರು ಒದಗಿಸಲಾಗುತ್ತಿದೆ. ಆದರೆ ಈ ನೀರು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.<br /> <br /> ಕೆಲವು ದಿನಗಳಿಂದ ಬಡವರು, ಕೂಲಿಕಾರ್ಮಿಕರು, ಕೃಷಿಕರು ತಮ್ಮೆಲ್ಲ ಕೆಲಸ ಕಾರ್ಯಗಳನ್ನು ತ್ಯಜಿಸಿ ನೀರು ತರುವುದನ್ನೇ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಆರೋಪಿಸಿದರು.<br /> <br /> ಗ್ರಾಮದಿಂದ ಟ್ರಾಕ್ಟರ್ಗಳಲ್ಲಿ ಆಗಮಿಸಿದ ಜನರು ಕಚೇರಿಯ ಬಾಗಿಲಿಗೆ ಬೀಗ ಹಾಕಿ ಧರಣಿ ನಡೆಸಿದರು. ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಕಚೇರಿ ಮುಂದೆ ಒಲೆ ಇಟ್ಟು ನೀರು ಕಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಬಿ.ಸಿ.ವಸಂತಕುಮಾರ್ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಶೀಘ್ರವಾಗಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಸೋಮಶೇಖರರೆಡ್ಡಿ, ಕೇಶವರೆಡ್ಡಿ, ಮಲ್ಲಪ್ಪರೆಡ್ಡಿ, ಚಿಕ್ಕಪಾಪಮ್ಮ, ನಾರೆಮ್ಮ, ಶಾಂತಮ್ಮ, ಸುಮಿತ್ರಮ್ಮ, ಕಿಟ್ಟಮ್ಮ, ಲಕ್ಷಮೀದೇವಮ್ಮ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;">ಚಿಂತಾಮಣಿ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ತಾಲ್ಲೂಕಿನ ಮುದ್ದುಲಹಳ್ಳಿ ಗ್ರಾಮದ ನೂರಾರು ನಾಗರಿಕರು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.</span></p>.<p>ನಂದಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದುಲಹಳ್ಳಿಯಲ್ಲಿ ಕೆಲ ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಅನೇಕ ಬಾರಿ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದಾಗಲೆಲ್ಲಾ ಸಮಸ್ಯೆ ಬಗೆಹರಿಸುವ ಭರವಸೆ ನೀಡುತ್ತಾರೆ. ಆದರೆ ಈವರೆಗೂ ಯಾವುದೇ ಭರವಸೆ ಈಡೇರಿಲ್ಲ. ಗ್ರಾಮದಲ್ಲಿ 2 ನೀರಿನ ಟ್ಯಾಂಕ್ಗಳಿವೆ. ಒಂದು ಟ್ಯಾಂಕ್ ನಿರ್ಮಾಣ ಹಂತದಲ್ಲಿದೆ. ಹಳ್ಳಿಗರಿಗೆ ನೀರು ಕೊಡುವುದಕ್ಕಿಂತ ಹಣ ಮಾಡುವುದೇ ಅಧಿಕಾರಿಗಳ ಉದ್ದೇಶವಾಗಿದೆ ಎಂದು ಆರೋಪಿಸಿದರು.<br /> <br /> ಗ್ರಾಮದಲ್ಲಿ 340 ಕುಟುಂಬಗಳಿದ್ದು, 3200 ಮಂದಿ ಜನಸಂಖ್ಯೆಯಿದೆ. ಜನ ಮತ್ತು ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ. ಪಂಚಾಯಿತಿ ವತಿಯಿಂದ ದಿನಕ್ಕೆ 2 ಟ್ಯಾಂಕರ್ ನೀರು ಒದಗಿಸಲಾಗುತ್ತಿದೆ. ಆದರೆ ಈ ನೀರು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.<br /> <br /> ಕೆಲವು ದಿನಗಳಿಂದ ಬಡವರು, ಕೂಲಿಕಾರ್ಮಿಕರು, ಕೃಷಿಕರು ತಮ್ಮೆಲ್ಲ ಕೆಲಸ ಕಾರ್ಯಗಳನ್ನು ತ್ಯಜಿಸಿ ನೀರು ತರುವುದನ್ನೇ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಆರೋಪಿಸಿದರು.<br /> <br /> ಗ್ರಾಮದಿಂದ ಟ್ರಾಕ್ಟರ್ಗಳಲ್ಲಿ ಆಗಮಿಸಿದ ಜನರು ಕಚೇರಿಯ ಬಾಗಿಲಿಗೆ ಬೀಗ ಹಾಕಿ ಧರಣಿ ನಡೆಸಿದರು. ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಕಚೇರಿ ಮುಂದೆ ಒಲೆ ಇಟ್ಟು ನೀರು ಕಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಬಿ.ಸಿ.ವಸಂತಕುಮಾರ್ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಶೀಘ್ರವಾಗಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಸೋಮಶೇಖರರೆಡ್ಡಿ, ಕೇಶವರೆಡ್ಡಿ, ಮಲ್ಲಪ್ಪರೆಡ್ಡಿ, ಚಿಕ್ಕಪಾಪಮ್ಮ, ನಾರೆಮ್ಮ, ಶಾಂತಮ್ಮ, ಸುಮಿತ್ರಮ್ಮ, ಕಿಟ್ಟಮ್ಮ, ಲಕ್ಷಮೀದೇವಮ್ಮ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>