<p>ಚಾಮರಾಜನಗರ: `ಪೌರಾಣಿಕ ನಾಟಕ ಕಲೆ ಗ್ರಾಮೀಣ ಭಾಗದಲ್ಲಿ ನಶಿಸುವ ಹಂತ ತಲುಪುತ್ತಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ವಿಷಾದಿಸಿದರು.<br /> <br /> ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಗ್ರಾಮೀಣ ಸೊಗಡು ಬಿಂಬಿಸುವ ಕಲೆಗಳು ನಶಿಸುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ. ರಾಜ್ಯ ಸರ್ಕಾರ ನಾಟಕ ಕಲಾವಿದರಿಗೆ ಮಾಸಾಶನ ನೀಡಬೇಕು. ಜತೆಗೆ, ನಾಟಕ ಪ್ರದರ್ಶನಕ್ಕೂ ಆರ್ಥಿಕ ನೆರವು ನೀಡಬೇಕು. ಆಗ ಮಾತ್ರ ಕಲೆ ಉಳಿಸಲು ಸಾಧ್ಯ~ ಎಂದು ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾ ಚಂದ್ರು ಮಾತ ನಾಡಿ, `ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ~ ಎಂದು ಹೇಳಿದರು.<br /> <br /> ಸಿನಿಮಾ ಮಾಧ್ಯಮದ ಭರಾಟೆಯಿಂದಾಗಿ ಗ್ರಾಮೀಣ ಕಲೆಗಳಿಗೆ ಕಂಟಕ ಎದುರಾಗಿದೆ. ಮನರಂಜನೆಗಾಗಿ ನಾವೆಲ್ಲರೂ ಸಿನಿಮಾಕ್ಕೆ ಮೊರೆಹೋಗಿದ್ದೇವೆ. ಹೀಗಾಗಿ, ಹಳ್ಳಿಗಳಲ್ಲೂ ಪೌರಾಣಿಕ ನಾಟಕ ಪ್ರದರ್ಶನ ಕಡಿಮೆಯಾಗುತ್ತಿದೆ. ಇದು ಆತಂಕಕಾರಿ ಸಂಗತಿ ಎಂದರು.<br /> <br /> ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ನೋಡುವಂತಹ ಸಿನಿಮಾಗಳು ಬರುತ್ತಿಲ್ಲ. ಪೌರಾಣಿಕ ನಾಟಕಗಳನ್ನು ಎಲ್ಲರೂ ಕುಳಿತು ವೀಕ್ಷಿಸಬಹುದು. ನಾಟಕ ಸಾರುವ ಸಂದೇಶವನ್ನು ಜೀವನದಲ್ಲಿಯೂ ಅಳವಡಿಸಿಕೊಳ್ಳಬಹುದು ಎಂದ ಅವರು, ಹಿರಿಯರು ಹಾಗೂ ಕಿರಿಯರು ಎಂಬ ಭೇದಭಾವ ಇಲ್ಲದೆ ಎಲ್ಲರೂ ನಾಟಕ ಕಲೆ ಉಳಿಸಬೇಕಿದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಒತ್ತಾಯಿಸಿದರು.<br /> <br /> ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ ಮಾತನಾಡಿ, `ಜಿಲ್ಲೆಯಲ್ಲಿ ಸುಸಜ್ಜಿತ ರಂಗಮಂದಿರದ ಕೊರತೆಯಿದೆ. ಇದರ ಪರಿಣಾಮ ನಾಟಕ ಪ್ರದರ್ಶನಕ್ಕೆ ತೊಡಕಾಗಿದೆ~ ಎಂದರು.<br /> ಪ್ರಸ್ತುತ ರಂಗಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡರೆ ರಂಗ ಚಟುವಟಿಕೆ ನಡೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು.<br /> <br /> ಸಂತೇಮರಹಳ್ಳಿಯ ಶ್ರೀಬಸವೇಶ್ವರ ಕಲಾ ತಂಡದ ಸದಸ್ಯರು `ದಕ್ಷಯಜ್ಞ~ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಪೌರಾಣಿಕ ನಾಟಕ ಕಲೆ ಗ್ರಾಮೀಣ ಭಾಗದಲ್ಲಿ ನಶಿಸುವ ಹಂತ ತಲುಪುತ್ತಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ವಿಷಾದಿಸಿದರು.<br /> <br /> ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಗ್ರಾಮೀಣ ಸೊಗಡು ಬಿಂಬಿಸುವ ಕಲೆಗಳು ನಶಿಸುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ. ರಾಜ್ಯ ಸರ್ಕಾರ ನಾಟಕ ಕಲಾವಿದರಿಗೆ ಮಾಸಾಶನ ನೀಡಬೇಕು. ಜತೆಗೆ, ನಾಟಕ ಪ್ರದರ್ಶನಕ್ಕೂ ಆರ್ಥಿಕ ನೆರವು ನೀಡಬೇಕು. ಆಗ ಮಾತ್ರ ಕಲೆ ಉಳಿಸಲು ಸಾಧ್ಯ~ ಎಂದು ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾ ಚಂದ್ರು ಮಾತ ನಾಡಿ, `ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ~ ಎಂದು ಹೇಳಿದರು.<br /> <br /> ಸಿನಿಮಾ ಮಾಧ್ಯಮದ ಭರಾಟೆಯಿಂದಾಗಿ ಗ್ರಾಮೀಣ ಕಲೆಗಳಿಗೆ ಕಂಟಕ ಎದುರಾಗಿದೆ. ಮನರಂಜನೆಗಾಗಿ ನಾವೆಲ್ಲರೂ ಸಿನಿಮಾಕ್ಕೆ ಮೊರೆಹೋಗಿದ್ದೇವೆ. ಹೀಗಾಗಿ, ಹಳ್ಳಿಗಳಲ್ಲೂ ಪೌರಾಣಿಕ ನಾಟಕ ಪ್ರದರ್ಶನ ಕಡಿಮೆಯಾಗುತ್ತಿದೆ. ಇದು ಆತಂಕಕಾರಿ ಸಂಗತಿ ಎಂದರು.<br /> <br /> ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ನೋಡುವಂತಹ ಸಿನಿಮಾಗಳು ಬರುತ್ತಿಲ್ಲ. ಪೌರಾಣಿಕ ನಾಟಕಗಳನ್ನು ಎಲ್ಲರೂ ಕುಳಿತು ವೀಕ್ಷಿಸಬಹುದು. ನಾಟಕ ಸಾರುವ ಸಂದೇಶವನ್ನು ಜೀವನದಲ್ಲಿಯೂ ಅಳವಡಿಸಿಕೊಳ್ಳಬಹುದು ಎಂದ ಅವರು, ಹಿರಿಯರು ಹಾಗೂ ಕಿರಿಯರು ಎಂಬ ಭೇದಭಾವ ಇಲ್ಲದೆ ಎಲ್ಲರೂ ನಾಟಕ ಕಲೆ ಉಳಿಸಬೇಕಿದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಒತ್ತಾಯಿಸಿದರು.<br /> <br /> ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ ಮಾತನಾಡಿ, `ಜಿಲ್ಲೆಯಲ್ಲಿ ಸುಸಜ್ಜಿತ ರಂಗಮಂದಿರದ ಕೊರತೆಯಿದೆ. ಇದರ ಪರಿಣಾಮ ನಾಟಕ ಪ್ರದರ್ಶನಕ್ಕೆ ತೊಡಕಾಗಿದೆ~ ಎಂದರು.<br /> ಪ್ರಸ್ತುತ ರಂಗಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡರೆ ರಂಗ ಚಟುವಟಿಕೆ ನಡೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು.<br /> <br /> ಸಂತೇಮರಹಳ್ಳಿಯ ಶ್ರೀಬಸವೇಶ್ವರ ಕಲಾ ತಂಡದ ಸದಸ್ಯರು `ದಕ್ಷಯಜ್ಞ~ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>