<p>ಕೊಳ್ಳೇಗಾಲ: ಶಿವನಸಮುದ್ರದ ಪ್ರಸನ್ನ ಮೀನಾಕ್ಷಿ ಸಮೇತ ಸೋಮೇಶ್ವರ ದೇವಾಲಯ ಪೂರ್ವ ಮಹಾದ್ವಾರದ ನೂತನ ಬಾಗಿಲು ಸಮರ್ಪಣಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.<br /> <br /> ಬೆಳಿಗ್ಗೆ ಪ್ರಸನ್ನ ಮೀನಾಕ್ಷಿ ದೇವಾಲಯ ಮುಂಬಾಗದ ಮಂಟಪದಲ್ಲಿ ವಿಶೇಷ ಪೂಜೆ ಮತ್ತು ಹೋಮ ನಡೆಯಿತು.<br /> ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿ ಸಲಾಗಿತ್ತು.<br /> <br /> ಮಳವಳ್ಳಿ, ಮಂಡ್ಯ, ಬೆಳಕವಾಡಿ ಸೇರಿದಂತೆ ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.<br /> ಬಿಳಿಗಿರಿರಂಗನ ಬೆಟ್ಟದ ವಾದ್ಯಗೋಷ್ಠಿಯ ಮೂಲಕ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಪೂರ್ವ ಮಹಾದ್ವಾರದ ನೂತನ ಬಾಗಿಲ ಮೂಲಕ ಹಸುವಿನ ಜೊತೆಗೂಡಿ ಉತ್ಸವ ಮೂರ್ತಿ ಪ್ರವೇಶಿಸುವ ಮೂಲಕ ಪೂರ್ವ ಬಾಗಿಲ ಸೇವೆಯನ್ನು ಸಾರ್ವಜನಿಕರಿಗೆ ಸಮರ್ಪಿಸಲಾಯಿತು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಯುವ ಸೌರಭ ಭಕ್ತಿಗೀತೆಗಳ ಗಾಯನ ನಡೆಯಿತು. ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.<br /> <br /> ದೇವಾಲಯದ ಜೀರ್ಣೋದ್ಧಾರಕ್ಕೆ ಕಾರಣಕರ್ತರಾದ ಉಪವಿಭಾಗಾಧಿಕಾರಿ ಎ.ಬಿ. ಬಸವರಾಜು ಹಾಗೂ ಇತರರನ್ನು ನರೇಂದ್ರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಶಿವನಸಮುದ್ರದ ಪ್ರಸನ್ನ ಮೀನಾಕ್ಷಿ ಸಮೇತ ಸೋಮೇಶ್ವರ ದೇವಾಲಯ ಪೂರ್ವ ಮಹಾದ್ವಾರದ ನೂತನ ಬಾಗಿಲು ಸಮರ್ಪಣಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.<br /> <br /> ಬೆಳಿಗ್ಗೆ ಪ್ರಸನ್ನ ಮೀನಾಕ್ಷಿ ದೇವಾಲಯ ಮುಂಬಾಗದ ಮಂಟಪದಲ್ಲಿ ವಿಶೇಷ ಪೂಜೆ ಮತ್ತು ಹೋಮ ನಡೆಯಿತು.<br /> ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿ ಸಲಾಗಿತ್ತು.<br /> <br /> ಮಳವಳ್ಳಿ, ಮಂಡ್ಯ, ಬೆಳಕವಾಡಿ ಸೇರಿದಂತೆ ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.<br /> ಬಿಳಿಗಿರಿರಂಗನ ಬೆಟ್ಟದ ವಾದ್ಯಗೋಷ್ಠಿಯ ಮೂಲಕ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಪೂರ್ವ ಮಹಾದ್ವಾರದ ನೂತನ ಬಾಗಿಲ ಮೂಲಕ ಹಸುವಿನ ಜೊತೆಗೂಡಿ ಉತ್ಸವ ಮೂರ್ತಿ ಪ್ರವೇಶಿಸುವ ಮೂಲಕ ಪೂರ್ವ ಬಾಗಿಲ ಸೇವೆಯನ್ನು ಸಾರ್ವಜನಿಕರಿಗೆ ಸಮರ್ಪಿಸಲಾಯಿತು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಯುವ ಸೌರಭ ಭಕ್ತಿಗೀತೆಗಳ ಗಾಯನ ನಡೆಯಿತು. ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.<br /> <br /> ದೇವಾಲಯದ ಜೀರ್ಣೋದ್ಧಾರಕ್ಕೆ ಕಾರಣಕರ್ತರಾದ ಉಪವಿಭಾಗಾಧಿಕಾರಿ ಎ.ಬಿ. ಬಸವರಾಜು ಹಾಗೂ ಇತರರನ್ನು ನರೇಂದ್ರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>