ಚಾಮರಾಜನಗರ: ಕೇಂದ್ರ ಸರ್ಕಾರ ಬಿದಿರನ್ನು ಕೃಷಿ ಉತ್ಪನ್ನ ಎಂದು ಪರಿಗಣಿಸಿದೆ. ಇದರಿಂದ ಬಿದಿರನ್ನು ಯಾರು ಬೇಕಾದರೂ ಕತ್ತರಿಸಿ, ಮಾರಾಟ ಮಾಡಬಹುದಾದ ಅವಕಾಶ ಇದೆ. ಆದರೆ, ಈ ನಿರ್ಧಾರಕ್ಕೆ ವ್ಯಾಪಕ ಪ್ರಚಾರ ಸಿಕ್ಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.ಇಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ₹ 100 ಕೋಟಿ ವೆಚ್ಚದಲ್ಲಿ ‘ಬಿದಿರು ಬೆಳೆ ಸಂಶೋಧನಾ ಕೇಂದ್ರ’ ವನ್ನು ಚಾಮರಾಜನಗರದಲ್ಲಿ ಸ್ಥಾಪಿಸಲಾ ಗುವುದು ಎಂದು ಭರವಸೆ ನೀಡಿದರು.