<p><strong>ಕೊಳ್ಳೇಗಾಲ:</strong> ರಾಷ್ಟ್ರೀಯ ಹೆದ್ದಾರಿ-209 ನಿರ್ಮಾಣಕ್ಕಾಗಿ ಸಣ್ಣ ಹಿಡುವಳಿದಾರರ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ರೈತರ ಜೊತೆ ಸಮಾಲೋಚನೆ ನಡೆಸಿದ ನಂತರ ಮಾತ್ರ ಮುಂದುವರಿಸಬೇಕು ಎಂದು ಬಿ.ಎಸ್.ಪಿ. ಮುಖಂಡ ಎನ್. ಮಹೇಶ್ ಒತ್ತಾಯಿಸಿದರು.<br /> <br /> ಪಟ್ಟಣದಲ್ಲಿ ರೈತರು, ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಮಂಗಳವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸತ್ತೇಗಾಲದಿಂದ ಚಾಮರಾಜನಗರದವರೆಗೆ ಸುಮಾರು 4 ಸಾವಿರಕ್ಕೂ ಹೆಚ್ಚು ಸಣ್ಣ ಹಿಡುವಳಿದಾರರ ಜಮೀನನ್ನು ಅವರ ಗಮನಕ್ಕೂ ತರದೆ, ಸ್ವಾಧೀನಕ್ಕೆ ಮುಂದಾಗಿರುವುದು ಅಮಾನವೀಯ ಹಾಗೂ ರೈತ ವಿರೋಧಿ ಕ್ರಮ ಎಂದು ದೂರಿದರು.<br /> <br /> ರಾಷ್ಟ್ರಿಯ ಹೆದ್ದಾರಿ 209ಕ್ಕೆ ಈ ಹಿಂದೆ ಕೈಗೊಂಡ 3 ಹಂತದ ನಿರ್ಣಯಗಳನ್ನು ಕೈಬಿಟ್ಟಿರುವುದು ಏಕೆ? ಎಂದು ಪ್ರಶ್ನಿಸಿದರು. ಸರ್ಕಾರ ಸಣ್ಣ ಹಿಡುವಳಿದಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಜಮೀನು ಸ್ವಾಧೀನ ಕಾರ್ಯಕ್ರಮ ಮುಂದಾಗಿರುವುದು ಮಾನವ ಹಕ್ಕು ಉಲ್ಲಂಘನೆ ಎಂದು ಟೀಕಿಸಿದರು.<br /> <br /> ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳು ಭೂಮಿ ಕಳೆದುಕೊಳ್ಳುತ್ತಿರುವ ರೈತರ ಸಮ್ಮುಖದಲ್ಲಿ ದಿನಾಂಕ ನಿಗದಿಪಡಿಸಿ ಸಮಸ್ಯೆಗಳನ್ನು ಕೇಳಬೇಕು. ರೈತರನ್ನು ಕಡೆಗಣಿಸಿ ಜಮೀನು ಸ್ವಾಧೀನಕ್ಕೆ ಮುಂದಾದಲ್ಲಿ ಮುಂದೆ ಉಂಟಾಗುವ ಎಲ್ಲ ಅನಾಹುತಗಳಿಗೂ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.<br /> <br /> ಉಪವಿಭಾಗಾಧಿಕಾರಿ ಎಚ್.ಎಸ್. ಸತೀಶ್ಬಾಬು ಅವರಿಗೆ ಮನವಿ ಸಲ್ಲಿಸಿ ಸರ್ಕಾರ ಗಮನ ಸೆಳೆಯುವಂತೆ ಮನವಿ ಮಾಡಿದರು.<br /> ಮೆರವಣಿಗೆ: ಪಟ್ಟಣದ ಬಸ್ನಿಲ್ದಾಣದ ಗಣಪತಿ ದೇವಾಲಯದಿಂದ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ಭೂ ಸ್ವಾಧೀನ ಪ್ರಕ್ರಿಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಡಾ.ರಾಜ್ಕುಮಾರ್ರಸ್ತೆ, ಡಾ. ಅಂಬೇಡ್ಕರ್ ರಸ್ತೆ ಸೇರಿದಂತೆ ಇತರೆ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ತಾಲ್ಲೂಕು ಕಚೇರಿ ತಲುಪಿದರು.<br /> <br /> ಪ್ರತಿಭಟನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.<br /> <br /> ರೈತಮುಂಖಂಡ ಅಣಗಳ್ಳಿ ಬಸವರಾಜು, ಬಿಎಸ್ಪಿ ಮುಖಂಡ ಶಿವಮಲ್ಲು, ಜಗದೀಶ್, ದೊಡ್ಡಿಂದುವಾಡಿ ಸಿದ್ದರಾಜು, ನಗರಸಭೆ ಸದಸ್ಯ ರಾಮಕೃಷ್ಣ, ರಂಗಸ್ವಾಮಿ, ಮಂಟಯ್ಯ, ಪ್ರಭಾ, ಸಿದ್ದರಾಜನಾಯಕ, ಹರೀಶ, ಲಕ್ಷ್ಮಣಸ್ವಾಮಿ, ಶಿವನಂಜಪ್ಪ, ನೀಲಯ್ಯ, ನಿಂಗರಾಜು, ಬಸಂತ್, ಸೋಮಣ್ಣ, ನರೀಪುರ ಸಿದ್ದರಾಜು, ಇತರರು ಇದ್ದರು.<br /> <br /> ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನದ ಬಗ್ಗೆ ರೈತರ ಸಭೆಯನ್ನು ಪಟ್ಟಣದಲ್ಲಿ ಶೀಘ್ರ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಸುರೇಶ್ಕುಮಾರ್ ತಿಳಿಸ್ದ್ದಿದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ರಾಷ್ಟ್ರೀಯ ಹೆದ್ದಾರಿ-209 ನಿರ್ಮಾಣಕ್ಕಾಗಿ ಸಣ್ಣ ಹಿಡುವಳಿದಾರರ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ರೈತರ ಜೊತೆ ಸಮಾಲೋಚನೆ ನಡೆಸಿದ ನಂತರ ಮಾತ್ರ ಮುಂದುವರಿಸಬೇಕು ಎಂದು ಬಿ.ಎಸ್.ಪಿ. ಮುಖಂಡ ಎನ್. ಮಹೇಶ್ ಒತ್ತಾಯಿಸಿದರು.<br /> <br /> ಪಟ್ಟಣದಲ್ಲಿ ರೈತರು, ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಮಂಗಳವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸತ್ತೇಗಾಲದಿಂದ ಚಾಮರಾಜನಗರದವರೆಗೆ ಸುಮಾರು 4 ಸಾವಿರಕ್ಕೂ ಹೆಚ್ಚು ಸಣ್ಣ ಹಿಡುವಳಿದಾರರ ಜಮೀನನ್ನು ಅವರ ಗಮನಕ್ಕೂ ತರದೆ, ಸ್ವಾಧೀನಕ್ಕೆ ಮುಂದಾಗಿರುವುದು ಅಮಾನವೀಯ ಹಾಗೂ ರೈತ ವಿರೋಧಿ ಕ್ರಮ ಎಂದು ದೂರಿದರು.<br /> <br /> ರಾಷ್ಟ್ರಿಯ ಹೆದ್ದಾರಿ 209ಕ್ಕೆ ಈ ಹಿಂದೆ ಕೈಗೊಂಡ 3 ಹಂತದ ನಿರ್ಣಯಗಳನ್ನು ಕೈಬಿಟ್ಟಿರುವುದು ಏಕೆ? ಎಂದು ಪ್ರಶ್ನಿಸಿದರು. ಸರ್ಕಾರ ಸಣ್ಣ ಹಿಡುವಳಿದಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಜಮೀನು ಸ್ವಾಧೀನ ಕಾರ್ಯಕ್ರಮ ಮುಂದಾಗಿರುವುದು ಮಾನವ ಹಕ್ಕು ಉಲ್ಲಂಘನೆ ಎಂದು ಟೀಕಿಸಿದರು.<br /> <br /> ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳು ಭೂಮಿ ಕಳೆದುಕೊಳ್ಳುತ್ತಿರುವ ರೈತರ ಸಮ್ಮುಖದಲ್ಲಿ ದಿನಾಂಕ ನಿಗದಿಪಡಿಸಿ ಸಮಸ್ಯೆಗಳನ್ನು ಕೇಳಬೇಕು. ರೈತರನ್ನು ಕಡೆಗಣಿಸಿ ಜಮೀನು ಸ್ವಾಧೀನಕ್ಕೆ ಮುಂದಾದಲ್ಲಿ ಮುಂದೆ ಉಂಟಾಗುವ ಎಲ್ಲ ಅನಾಹುತಗಳಿಗೂ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.<br /> <br /> ಉಪವಿಭಾಗಾಧಿಕಾರಿ ಎಚ್.ಎಸ್. ಸತೀಶ್ಬಾಬು ಅವರಿಗೆ ಮನವಿ ಸಲ್ಲಿಸಿ ಸರ್ಕಾರ ಗಮನ ಸೆಳೆಯುವಂತೆ ಮನವಿ ಮಾಡಿದರು.<br /> ಮೆರವಣಿಗೆ: ಪಟ್ಟಣದ ಬಸ್ನಿಲ್ದಾಣದ ಗಣಪತಿ ದೇವಾಲಯದಿಂದ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ಭೂ ಸ್ವಾಧೀನ ಪ್ರಕ್ರಿಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಡಾ.ರಾಜ್ಕುಮಾರ್ರಸ್ತೆ, ಡಾ. ಅಂಬೇಡ್ಕರ್ ರಸ್ತೆ ಸೇರಿದಂತೆ ಇತರೆ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ತಾಲ್ಲೂಕು ಕಚೇರಿ ತಲುಪಿದರು.<br /> <br /> ಪ್ರತಿಭಟನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.<br /> <br /> ರೈತಮುಂಖಂಡ ಅಣಗಳ್ಳಿ ಬಸವರಾಜು, ಬಿಎಸ್ಪಿ ಮುಖಂಡ ಶಿವಮಲ್ಲು, ಜಗದೀಶ್, ದೊಡ್ಡಿಂದುವಾಡಿ ಸಿದ್ದರಾಜು, ನಗರಸಭೆ ಸದಸ್ಯ ರಾಮಕೃಷ್ಣ, ರಂಗಸ್ವಾಮಿ, ಮಂಟಯ್ಯ, ಪ್ರಭಾ, ಸಿದ್ದರಾಜನಾಯಕ, ಹರೀಶ, ಲಕ್ಷ್ಮಣಸ್ವಾಮಿ, ಶಿವನಂಜಪ್ಪ, ನೀಲಯ್ಯ, ನಿಂಗರಾಜು, ಬಸಂತ್, ಸೋಮಣ್ಣ, ನರೀಪುರ ಸಿದ್ದರಾಜು, ಇತರರು ಇದ್ದರು.<br /> <br /> ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನದ ಬಗ್ಗೆ ರೈತರ ಸಭೆಯನ್ನು ಪಟ್ಟಣದಲ್ಲಿ ಶೀಘ್ರ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಸುರೇಶ್ಕುಮಾರ್ ತಿಳಿಸ್ದ್ದಿದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>