<p><strong>ಚಾಮರಾಜನಗರ</strong>: ಮಾಂಸಕ್ಕಾಗಿ ಕಾಡೆಮ್ಮೆಯನ್ನು ಬೇಟೆಯಾಡಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.<br /> <br /> ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ನಂಜುಂಡಯ್ಯ ಬಂಧಿತ. ಬಿಳಿಗಿರಿರಂಗನಾಥಸ್ವಾಮಿ ಹುಲಿ ರಕ್ಷಿತಾರಣ್ಯ(ಬಿಆರ್ಟಿ)ದ ವ್ಯಾಪ್ತಿಯ ಅಟ್ಟುಗುಳಿಪುರದ ಉಪ್ಪಳ ಪ್ರದೇಶದ ಬಳಿ ಕಾಡೆಮ್ಮೆಯನ್ನು ಕೊಂದು ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಳಿದ ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದಾರೆ.<br /> <br /> ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ನಾಗರಾಜು ಹಾಗೂ ವಲಯ ಅರಣ್ಯ ಅಧಿಕಾರಿ ಎ.ಖಾನ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾದ ಎಸ್.ಲೋಹಿತ್, ರವಿ, ಬಿ.ಮಾಲಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. <br /> <br /> `ಆರೋಪಿಯ ವಿಚಾರಣೆ ವೇಳೆ ಮಾಂಸಕ್ಕಾಗಿ ಕಾಡೆಮ್ಮೆ ಬೇಟೆ ಯಾಡಿರುವ ಅಂಶ ತಿಳಿದುಬಂದಿದೆ. ತನಿಖೆ ಮುಂದುವರಿದಿದ್ದು, ಶೀಘ್ರವೇ ಇನ್ನುಳಿದ ಆರೋಪಿಗಳನ್ನು ಬಂಧಿಸ ಲಾಗುವುದು~ ಎಂದು ಬಿಆರ್ಟಿ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ವಿಜಯ್ ಮೋಹನ್ರಾಜ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಮಾಂಸಕ್ಕಾಗಿ ಕಾಡೆಮ್ಮೆಯನ್ನು ಬೇಟೆಯಾಡಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.<br /> <br /> ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ನಂಜುಂಡಯ್ಯ ಬಂಧಿತ. ಬಿಳಿಗಿರಿರಂಗನಾಥಸ್ವಾಮಿ ಹುಲಿ ರಕ್ಷಿತಾರಣ್ಯ(ಬಿಆರ್ಟಿ)ದ ವ್ಯಾಪ್ತಿಯ ಅಟ್ಟುಗುಳಿಪುರದ ಉಪ್ಪಳ ಪ್ರದೇಶದ ಬಳಿ ಕಾಡೆಮ್ಮೆಯನ್ನು ಕೊಂದು ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಳಿದ ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದಾರೆ.<br /> <br /> ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ನಾಗರಾಜು ಹಾಗೂ ವಲಯ ಅರಣ್ಯ ಅಧಿಕಾರಿ ಎ.ಖಾನ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾದ ಎಸ್.ಲೋಹಿತ್, ರವಿ, ಬಿ.ಮಾಲಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. <br /> <br /> `ಆರೋಪಿಯ ವಿಚಾರಣೆ ವೇಳೆ ಮಾಂಸಕ್ಕಾಗಿ ಕಾಡೆಮ್ಮೆ ಬೇಟೆ ಯಾಡಿರುವ ಅಂಶ ತಿಳಿದುಬಂದಿದೆ. ತನಿಖೆ ಮುಂದುವರಿದಿದ್ದು, ಶೀಘ್ರವೇ ಇನ್ನುಳಿದ ಆರೋಪಿಗಳನ್ನು ಬಂಧಿಸ ಲಾಗುವುದು~ ಎಂದು ಬಿಆರ್ಟಿ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ವಿಜಯ್ ಮೋಹನ್ರಾಜ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>