ತಾಲ್ಲೂಕಿನ ಗುಂಬಳ್ಳಿ, ಯರಗಂಬಳ್ಳಿ, ಗಂಗವಾಡಿ ಮೊದಲಾದ ಕಡೆ ಮರಳು ಮತ್ತು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದ ಕಾರಣ ಅಧಿಕ ಭಾರ ಹೊತ್ತ ವಾಹನಗಳು ಇಲ್ಲಿ ಸಂಚರಿಸುತ್ತಿದ್ದವು. ಅವುಗಳ ಭಾರ ತಡೆಯಲಾರದೆ ಕುಸಿಯುವ ಹಂತಕ್ಕೆ ತಲುಪಿತ್ತು.
ಅಲ್ಲದೇ, ಮಳೆಗಾಲದಲ್ಲಿ ಸೇತುವೆ ತಳಭಾಗದಲ್ಲಿ ನೀರು ಸೋರಿಕೆಯಾಗುತ್ತಿತ್ತು.
ಆಗ ಸ್ಥಳೀಯರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಸಲ್ಲಿಸಿದ ನಂತರ ಅಧಿಕ ಭಾರ ಹೊತ್ತ ವಾಹನಗಳನ್ನು ಓಡಾಟವನ್ನು ನಿಷೇಧಿಸಲಾಗಿತ್ತು.