<p>ಚಾಮರಾಜನಗರ: `ಯುವಜನರನ್ನು ಅಭಿಯಾನದಡಿ ತೊಡಗಿಸಿಕೊಂಡು ಸ್ವಪರಿವರ್ತನೆ, ಸಮಾಜ ರಕ್ಷಕ ಚಿಂತನೆ ಬೆಳೆಸುವ ಉದ್ದೇಶ ಹೊಂದಲಾಗಿದೆ~ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿಯ ಸಂಚಾಲಕಿ ವೀಣಾ ಹೇಳಿದರು. <br /> <br /> ನಗರದ ಪ್ರಕಾಶ ಭವನದಲ್ಲಿ ಈಚೆಗೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ, ಇನ್ನರ್ವ್ಹೀಲ್ ಹಾಗೂ ಸಂಜೀವಿನಿ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ಯುವ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. <br /> <br /> ಯುವಕರಲ್ಲಿ ಆತ್ಮವಿಶ್ವಾಸ ಮೂಡಿಸಲಾಗುವುದು. ಭ್ರಷ್ಟಾಚಾರ ಮತ್ತು ಮದ್ಯಪಾನದ ವಿರುದ್ಧ ಹೋರಾಟ ಮಾಡುವ ಗುಣ ಬೆಳೆಸಿಕೊಳ್ಳಲು ಅರಿವು ಮೂಡಿಸಲಾಗುವುದು ಎಂದರು. <br /> <br /> ವಿದ್ಯಾವಿಕಾಸ ಪ್ರಶಿಕ್ಷಣ ಸಂಸ್ಥೆಯ ಉಪ ಪ್ರಾಂಶುಪಾಲ ಶಿವಕುಮಾರ ಮಾತನಾಡಿ, ಯುವಕರು ಒತ್ತಡದಿಂದ ಮುಕ್ತರಾಗಬೇಕು. ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಆ ಮೂಲಕ ಯುವಶಕ್ತಿ ರಾಷ್ಟ್ರದ ಶಕ್ತಿಯಾಗಿ ಹೊರಹೊಮ್ಮಬೇಕಿದೆ ಎಂದು ಸಲಹೆ ನೀಡಿದರು. <br /> <br /> ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ, ಮೈಸೂರು ವಿವಿಯ ನಿವೃತ್ತ ರಿಜಿಸ್ಟಾರ್ ಆನಂದಾಚಾರ್, ಮೋಹನ, ಕುಮಾರಿ ಇತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಯುವಜನರನ್ನು ಅಭಿಯಾನದಡಿ ತೊಡಗಿಸಿಕೊಂಡು ಸ್ವಪರಿವರ್ತನೆ, ಸಮಾಜ ರಕ್ಷಕ ಚಿಂತನೆ ಬೆಳೆಸುವ ಉದ್ದೇಶ ಹೊಂದಲಾಗಿದೆ~ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿಯ ಸಂಚಾಲಕಿ ವೀಣಾ ಹೇಳಿದರು. <br /> <br /> ನಗರದ ಪ್ರಕಾಶ ಭವನದಲ್ಲಿ ಈಚೆಗೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ, ಇನ್ನರ್ವ್ಹೀಲ್ ಹಾಗೂ ಸಂಜೀವಿನಿ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ಯುವ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. <br /> <br /> ಯುವಕರಲ್ಲಿ ಆತ್ಮವಿಶ್ವಾಸ ಮೂಡಿಸಲಾಗುವುದು. ಭ್ರಷ್ಟಾಚಾರ ಮತ್ತು ಮದ್ಯಪಾನದ ವಿರುದ್ಧ ಹೋರಾಟ ಮಾಡುವ ಗುಣ ಬೆಳೆಸಿಕೊಳ್ಳಲು ಅರಿವು ಮೂಡಿಸಲಾಗುವುದು ಎಂದರು. <br /> <br /> ವಿದ್ಯಾವಿಕಾಸ ಪ್ರಶಿಕ್ಷಣ ಸಂಸ್ಥೆಯ ಉಪ ಪ್ರಾಂಶುಪಾಲ ಶಿವಕುಮಾರ ಮಾತನಾಡಿ, ಯುವಕರು ಒತ್ತಡದಿಂದ ಮುಕ್ತರಾಗಬೇಕು. ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಆ ಮೂಲಕ ಯುವಶಕ್ತಿ ರಾಷ್ಟ್ರದ ಶಕ್ತಿಯಾಗಿ ಹೊರಹೊಮ್ಮಬೇಕಿದೆ ಎಂದು ಸಲಹೆ ನೀಡಿದರು. <br /> <br /> ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ, ಮೈಸೂರು ವಿವಿಯ ನಿವೃತ್ತ ರಿಜಿಸ್ಟಾರ್ ಆನಂದಾಚಾರ್, ಮೋಹನ, ಕುಮಾರಿ ಇತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>