<p><strong>ಕೊಳ್ಳೇಗಾಲ:</strong> ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ತಮಿಳುನಾಡಿಗೆ ಪರಾರಿಯಾಗಿದ್ದ ಆರೋಪಿಗಳನ್ನು ತಾಲ್ಲೂಕಿನ ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.<br /> <br /> ಎಂ.ಟಿ.ದೊಡ್ಡಿ ವಾಸಿ ಗಿರಿಗೌಡ ಹಾಗೂ ಆತನ ಪುತ್ರ ದೇವರಾಜು ಎಂಬುವವರೇ ಬಂಧಿತ ಆರೋಪಿಗಳು. ಕೊಳ್ಳೇಗಾಲ ತಾಲ್ಲೂಕಿನ ಭದ್ರಯ್ಯನಹಳ್ಳಿ ಸುಧಾ (26) ಅವರನ್ನು ಇದೇ ತಾಲ್ಲೂಕಿನ ಎಂ.ಟಿ.ದೊಡ್ಡಿ ನಿವಾಸಿ ಗಿರಿಗೌಡನ ಮಗ ದೇವರಾಜು ಜೊತೆ 2 ವರ್ಷಗಳ ಹಿಂದೆ ವಿವಾಹವಾಗಿತ್ತು. ಮೃತ ಸುಧಾಳಿಗೆ 11 ತಿಂಗಳ ಮಗು ಇದ್ದು, ಅವಳ ತಂದೆ ಮನೆಯಿಂದ ಸಂಕ್ರಾಂತಿ ಹಬ್ಬಕ್ಕೆ ಪತಿ ಮನೆಗೆ ಬಂದಿದ್ದಳು. ಅಲ್ಲಿಯೇ ವಿಷ ಸೇವಿಸಿ ಸಾವನ್ನಪ್ಪಿದ್ದಳು. <br /> <br /> ವರದಕ್ಷಿಣೆ ಕಿರುಕುಳದಿಂದ ಸುಧಾ ಸಾವನ್ನಪ್ಪಿದ್ದಾಳೆಂದು ಸಹೋದರ ಲಿಂಗೇಗೌಡ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಎಚ್.ಆರ್. ಮಹದೇವಯ್ಯ ತನಿಖೆ ಮುಂದುವರೆಸಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕೊಯಮತ್ತೂರಿನಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ತಮಿಳುನಾಡಿಗೆ ಪರಾರಿಯಾಗಿದ್ದ ಆರೋಪಿಗಳನ್ನು ತಾಲ್ಲೂಕಿನ ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.<br /> <br /> ಎಂ.ಟಿ.ದೊಡ್ಡಿ ವಾಸಿ ಗಿರಿಗೌಡ ಹಾಗೂ ಆತನ ಪುತ್ರ ದೇವರಾಜು ಎಂಬುವವರೇ ಬಂಧಿತ ಆರೋಪಿಗಳು. ಕೊಳ್ಳೇಗಾಲ ತಾಲ್ಲೂಕಿನ ಭದ್ರಯ್ಯನಹಳ್ಳಿ ಸುಧಾ (26) ಅವರನ್ನು ಇದೇ ತಾಲ್ಲೂಕಿನ ಎಂ.ಟಿ.ದೊಡ್ಡಿ ನಿವಾಸಿ ಗಿರಿಗೌಡನ ಮಗ ದೇವರಾಜು ಜೊತೆ 2 ವರ್ಷಗಳ ಹಿಂದೆ ವಿವಾಹವಾಗಿತ್ತು. ಮೃತ ಸುಧಾಳಿಗೆ 11 ತಿಂಗಳ ಮಗು ಇದ್ದು, ಅವಳ ತಂದೆ ಮನೆಯಿಂದ ಸಂಕ್ರಾಂತಿ ಹಬ್ಬಕ್ಕೆ ಪತಿ ಮನೆಗೆ ಬಂದಿದ್ದಳು. ಅಲ್ಲಿಯೇ ವಿಷ ಸೇವಿಸಿ ಸಾವನ್ನಪ್ಪಿದ್ದಳು. <br /> <br /> ವರದಕ್ಷಿಣೆ ಕಿರುಕುಳದಿಂದ ಸುಧಾ ಸಾವನ್ನಪ್ಪಿದ್ದಾಳೆಂದು ಸಹೋದರ ಲಿಂಗೇಗೌಡ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಎಚ್.ಆರ್. ಮಹದೇವಯ್ಯ ತನಿಖೆ ಮುಂದುವರೆಸಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕೊಯಮತ್ತೂರಿನಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>