<p><strong>ಚಾಮರಾಜನಗರ:</strong> ಜಿಲ್ಲೆಯ ವಿವಿಧೆಡೆ ಈಚೆಗೆ ವಿಶ್ವ ಹಾಲು ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> ವೆಂಕಟಯ್ಯನಛತ್ರ: ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> <br /> ಸಂಘದ ಅಧ್ಯಕ್ಷ ಎಂ. ಬಸವಣ್ಣ ಮಾತನಾಡಿ, ವಿಶ್ವ ಹಾಲು ದಿನಾಚರಣೆ ಮೂಲಕ ಮಕ್ಕಳಿಗೆ ಹಾಲಿನಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಒಕ್ಕೂಟದ ವಿಸ್ತರಣಾಧಿಕಾರಿ ಎಸ್. ನಾಗರಾಜು, ನಿರ್ದೇಶಕರಾದ ಗುರುಸ್ವಾಮಿ, ಲಕ್ಷ್ಮಣಯ್ಯ, ಮಹದೇವಶೆಟ್ಟಿ, ಬಸವಣ್ಣ, ಮುಖ್ಯಶಿಕ್ಷಕ ಚನ್ನಂಜಯ್ಯ, ಕಾರ್ಯದರ್ಶಿ ಚಿಕ್ಕಸ್ವಾಮಪ್ಪ ಹಾಜರಿದ್ದರು.<br /> <br /> ಕೊತ್ತಲವಾಡಿ: ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> <br /> ಸಂಘದ ಅಧ್ಯಕ್ಷ ಮಹದೇವಪ್ಪ ಮಾತನಾಡಿ, ಹಾಲು ಪೌಷ್ಟಿಕ ಆಹಾರ. ಮಗುವಿನಿಂದ ವೃದ್ಧರವರೆಗೂ ಆರೋಗ್ಯ ಕಾಪಾಡಲು ಹಾಲು ಆವಶ್ಯಕವಾಗಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಪಿ. ಮಹಾಂತಪ್ಪ. ಶಿವಮೂರ್ತಿ, ಮಹದೇವಸ್ವಾಮಿ, ಮಹೇಶ್, ಚಿನ್ನಮ್ಮ, ರಾಜಪ್ಪ, ವೆಂಕಟಯ್ಯ, ಕಾರ್ಯದರ್ಶಿ ರಾಜಶೇಖರಮೂರ್ತಿ ಹಾಜರಿದ್ದರು.<br /> <br /> ಮಂಗಲ: ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ವಿಶ್ವ ಹಾಲು ದಿನಾಚರಣೆ ನಡೆಯಿತು. ಶಾಲಾ ಮಕ್ಕಳಿಗೆ ಹಾಲು ವಿತರಿಸಲಾಯಿತು. ಮೈಮುಲ್ ವಿಸ್ತರಣಾಧಿಕಾರಿ ಎಸ್.ಎಂ. ವೆಂಕಟೇಶ್, ಸಂಘದ ಅಧ್ಯಕ್ಷರು, ನಿರ್ದೇಶಕರು, ಶಾಲಾ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯ ವಿವಿಧೆಡೆ ಈಚೆಗೆ ವಿಶ್ವ ಹಾಲು ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> ವೆಂಕಟಯ್ಯನಛತ್ರ: ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> <br /> ಸಂಘದ ಅಧ್ಯಕ್ಷ ಎಂ. ಬಸವಣ್ಣ ಮಾತನಾಡಿ, ವಿಶ್ವ ಹಾಲು ದಿನಾಚರಣೆ ಮೂಲಕ ಮಕ್ಕಳಿಗೆ ಹಾಲಿನಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಒಕ್ಕೂಟದ ವಿಸ್ತರಣಾಧಿಕಾರಿ ಎಸ್. ನಾಗರಾಜು, ನಿರ್ದೇಶಕರಾದ ಗುರುಸ್ವಾಮಿ, ಲಕ್ಷ್ಮಣಯ್ಯ, ಮಹದೇವಶೆಟ್ಟಿ, ಬಸವಣ್ಣ, ಮುಖ್ಯಶಿಕ್ಷಕ ಚನ್ನಂಜಯ್ಯ, ಕಾರ್ಯದರ್ಶಿ ಚಿಕ್ಕಸ್ವಾಮಪ್ಪ ಹಾಜರಿದ್ದರು.<br /> <br /> ಕೊತ್ತಲವಾಡಿ: ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಲು ವಿತರಿಸಲಾಯಿತು.<br /> <br /> ಸಂಘದ ಅಧ್ಯಕ್ಷ ಮಹದೇವಪ್ಪ ಮಾತನಾಡಿ, ಹಾಲು ಪೌಷ್ಟಿಕ ಆಹಾರ. ಮಗುವಿನಿಂದ ವೃದ್ಧರವರೆಗೂ ಆರೋಗ್ಯ ಕಾಪಾಡಲು ಹಾಲು ಆವಶ್ಯಕವಾಗಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಪಿ. ಮಹಾಂತಪ್ಪ. ಶಿವಮೂರ್ತಿ, ಮಹದೇವಸ್ವಾಮಿ, ಮಹೇಶ್, ಚಿನ್ನಮ್ಮ, ರಾಜಪ್ಪ, ವೆಂಕಟಯ್ಯ, ಕಾರ್ಯದರ್ಶಿ ರಾಜಶೇಖರಮೂರ್ತಿ ಹಾಜರಿದ್ದರು.<br /> <br /> ಮಂಗಲ: ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ವಿಶ್ವ ಹಾಲು ದಿನಾಚರಣೆ ನಡೆಯಿತು. ಶಾಲಾ ಮಕ್ಕಳಿಗೆ ಹಾಲು ವಿತರಿಸಲಾಯಿತು. ಮೈಮುಲ್ ವಿಸ್ತರಣಾಧಿಕಾರಿ ಎಸ್.ಎಂ. ವೆಂಕಟೇಶ್, ಸಂಘದ ಅಧ್ಯಕ್ಷರು, ನಿರ್ದೇಶಕರು, ಶಾಲಾ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>