<p><strong>ಚಾಮರಾಜನಗರ</strong>: `ವಿಶ್ವಕರ್ಮ ಜನಾಂಗಕ್ಕೆ ಸೂಕ್ತ ಮೀಸಲಾತಿ ಸೌಲಭ್ಯ ಹಾಗೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ~ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ. ನಂಜುಂಡಿ ದೂರಿದರು. <br /> <br /> ಮೈಸೂರಿನಲ್ಲಿ ಸೆ. 17ರಂದು ನಡೆಯುವ 3ನೇ ರಾಜ್ಯಮಟ್ಟದ ವಿಶ್ವಕರ್ಮ ಜಯಂತ್ಯುತ್ಸವದ ಅಂಗವಾಗಿ ನಗರದ ಜೆ.ಎಚ್. ಪಟೇಲ್ ಸಭಾಂಗ ಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ರಾಜ್ಯದಲ್ಲಿ 35 ಲಕ್ಷದಷ್ಟು ವಿಶ್ವಕರ್ಮ ಸಮಾಜ ದವರಿದ್ದಾರೆ. ಹಿಂದುಳಿದ ಜಾತಿಗಳಲ್ಲಿ ಎರಡನೇ ಅತಿದೊಡ್ಡ ಸಮುದಾಯಕ್ಕೆ ಮಾತ್ರ ಸೌಲಭ್ಯ ಸಿಗುತ್ತಿಲ್ಲ. ಸಂಘಟಿತರಾದರೆ ಮಾತ್ರ ಸರ್ಕಾರಿ ಸೌಲಭ್ಯ ದಕ್ಕುತ್ತವೆ. ಸರ್ಕಾರ ಸವಲತ್ತು ಕಲ್ಪಿಸುವ ವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. <br /> <br /> ವಿಶ್ವಕರ್ಮ ಜನಾಂಗಕ್ಕೆ ಶೇ. 3ರಷ್ಟು ಮೀಸಲಾತಿ ಸೌಲಭ್ಯ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸಬೇಕು. ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಚಿನ್ನ-ಬೆಳ್ಳಿ ಕೆಲಸಗಾರರ ಮೇಲೆ ಪೊಲೀಸರು ಅನಗತ್ಯವಾಗಿ ದೌರ್ಜನ್ಯ ಎಸಗು ತ್ತಿದ್ದಾರೆ. ಕಳ್ಳನನ್ನು ನಂಬುವ ಅಧಿಕಾರಿಗಳಿಗೆ ಆಭರಣ ತಯಾರಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲದಂತಾಗಿದೆ. ಆಭರಣ ತಯಾರಕರ ಮೇಲೆ ದೂರು ದಾಖಲಿಸುವ ಮುನ್ನ ಸಂಘ-ಸಂಸ್ಥೆಗ ಂದಿಗೆ ಚರ್ಚಿಸಬೇಕು ಎಂದು ಒತ್ತಾಯಿಸಿದರು. <br /> <br /> ಹೊರರಾಜ್ಯಗಳಿಂದ ತೆರಿಗೆ ರಹಿತವಾಗಿ ರಾಜ್ಯದೊಳಕ್ಕೆ ಚಿನ್ನಾಭರಣ ಪೂರೈಕೆಯಾಗುತ್ತಿದೆ. ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಸಿ ಅಂಥ ರೆಡಿಮೇಡ್ ಆಭರಣದ ಮೇಲೆ ತೆರಿಗೆ ವಿಧಿಸಬೇಕು. ಕಬ್ಬಿಣ ಮತ್ತು ಮರಗೆಲಸ ಮಾಡುವ ವಿಶ್ವಕರ್ಮ ಜನಾಂಗದವರಿಗೆ ಗ್ರಾಮೀಣ ಪ್ರದೇಶದಲ್ಲಿ ಪ್ರತ್ಯೇಕ ಶೆಡ್ ನಿರ್ಮಿಸಿ ಕೊಡಬೇಕು ಎಂದರು. <br /> <br /> ವಿಶ್ವಕರ್ಮ ಸಮಾಜದ 67 ಮಠಗಳಿಗೆ ಸರ್ಕಾರ ನಿವೇಶನ ಮಂಜೂರು ಮಾಡಬೇಕು. ಸೆ. 17ರಂದು ಸರ್ಕಾರದ ಮಟ್ಟದಲ್ಲಿ ವಿಶ್ವಕರ್ಮ ಜಯಂತಿ ಆಚರಿಸುವ ಮೂಲಕ ಅಂದು ಸರ್ಕಾರಿ ರಜೆ ಘೋಷಣೆಗೆ ಕ್ರಮಕೈಗೊಳ್ಳಬೇಕು ಎಂದರು.<br /> <br /> ಮೈಸೂರಿನಲ್ಲಿ ಹಮ್ಮಿಕೊಂಡಿರುವ ಜಯಂತ್ಯು ತ್ಸವ ಜಾತ್ಯತೀತವಾಗಿ ನಡೆಯಲಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಉದ್ಘಾಟನೆ ನೆರವೇರಿಸ ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಧ್ಯಕ್ಷತೆವಹಿಸಲಿದ್ದಾರೆ. ಪಂಚಲೋಹದಿಂದ ನಿರ್ಮಿಸಿರುವ ವಿಶ್ವಕರ್ಮರ 250 ಕೆಜಿ ತೂಕದ ಪುತ್ಥಳಿಯ ಮೆರವಣಿಗೆ ನಡೆಯಲಿದೆ ಎಂದರು. <br /> <br /> ಸಭೆಯಲ್ಲಿ ಮುಖಂಡರಾದ ಚಂದ್ರು, ಸತೀಶ್ಕುಮಾರ್, ಬಿ. ಮುರುಗೇಶ್ ಸೇರಿದಂತೆ ಸಮಾಜ ಬಾಂಧವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: `ವಿಶ್ವಕರ್ಮ ಜನಾಂಗಕ್ಕೆ ಸೂಕ್ತ ಮೀಸಲಾತಿ ಸೌಲಭ್ಯ ಹಾಗೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ~ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ. ನಂಜುಂಡಿ ದೂರಿದರು. <br /> <br /> ಮೈಸೂರಿನಲ್ಲಿ ಸೆ. 17ರಂದು ನಡೆಯುವ 3ನೇ ರಾಜ್ಯಮಟ್ಟದ ವಿಶ್ವಕರ್ಮ ಜಯಂತ್ಯುತ್ಸವದ ಅಂಗವಾಗಿ ನಗರದ ಜೆ.ಎಚ್. ಪಟೇಲ್ ಸಭಾಂಗ ಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ರಾಜ್ಯದಲ್ಲಿ 35 ಲಕ್ಷದಷ್ಟು ವಿಶ್ವಕರ್ಮ ಸಮಾಜ ದವರಿದ್ದಾರೆ. ಹಿಂದುಳಿದ ಜಾತಿಗಳಲ್ಲಿ ಎರಡನೇ ಅತಿದೊಡ್ಡ ಸಮುದಾಯಕ್ಕೆ ಮಾತ್ರ ಸೌಲಭ್ಯ ಸಿಗುತ್ತಿಲ್ಲ. ಸಂಘಟಿತರಾದರೆ ಮಾತ್ರ ಸರ್ಕಾರಿ ಸೌಲಭ್ಯ ದಕ್ಕುತ್ತವೆ. ಸರ್ಕಾರ ಸವಲತ್ತು ಕಲ್ಪಿಸುವ ವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. <br /> <br /> ವಿಶ್ವಕರ್ಮ ಜನಾಂಗಕ್ಕೆ ಶೇ. 3ರಷ್ಟು ಮೀಸಲಾತಿ ಸೌಲಭ್ಯ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸಬೇಕು. ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಚಿನ್ನ-ಬೆಳ್ಳಿ ಕೆಲಸಗಾರರ ಮೇಲೆ ಪೊಲೀಸರು ಅನಗತ್ಯವಾಗಿ ದೌರ್ಜನ್ಯ ಎಸಗು ತ್ತಿದ್ದಾರೆ. ಕಳ್ಳನನ್ನು ನಂಬುವ ಅಧಿಕಾರಿಗಳಿಗೆ ಆಭರಣ ತಯಾರಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲದಂತಾಗಿದೆ. ಆಭರಣ ತಯಾರಕರ ಮೇಲೆ ದೂರು ದಾಖಲಿಸುವ ಮುನ್ನ ಸಂಘ-ಸಂಸ್ಥೆಗ ಂದಿಗೆ ಚರ್ಚಿಸಬೇಕು ಎಂದು ಒತ್ತಾಯಿಸಿದರು. <br /> <br /> ಹೊರರಾಜ್ಯಗಳಿಂದ ತೆರಿಗೆ ರಹಿತವಾಗಿ ರಾಜ್ಯದೊಳಕ್ಕೆ ಚಿನ್ನಾಭರಣ ಪೂರೈಕೆಯಾಗುತ್ತಿದೆ. ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಸಿ ಅಂಥ ರೆಡಿಮೇಡ್ ಆಭರಣದ ಮೇಲೆ ತೆರಿಗೆ ವಿಧಿಸಬೇಕು. ಕಬ್ಬಿಣ ಮತ್ತು ಮರಗೆಲಸ ಮಾಡುವ ವಿಶ್ವಕರ್ಮ ಜನಾಂಗದವರಿಗೆ ಗ್ರಾಮೀಣ ಪ್ರದೇಶದಲ್ಲಿ ಪ್ರತ್ಯೇಕ ಶೆಡ್ ನಿರ್ಮಿಸಿ ಕೊಡಬೇಕು ಎಂದರು. <br /> <br /> ವಿಶ್ವಕರ್ಮ ಸಮಾಜದ 67 ಮಠಗಳಿಗೆ ಸರ್ಕಾರ ನಿವೇಶನ ಮಂಜೂರು ಮಾಡಬೇಕು. ಸೆ. 17ರಂದು ಸರ್ಕಾರದ ಮಟ್ಟದಲ್ಲಿ ವಿಶ್ವಕರ್ಮ ಜಯಂತಿ ಆಚರಿಸುವ ಮೂಲಕ ಅಂದು ಸರ್ಕಾರಿ ರಜೆ ಘೋಷಣೆಗೆ ಕ್ರಮಕೈಗೊಳ್ಳಬೇಕು ಎಂದರು.<br /> <br /> ಮೈಸೂರಿನಲ್ಲಿ ಹಮ್ಮಿಕೊಂಡಿರುವ ಜಯಂತ್ಯು ತ್ಸವ ಜಾತ್ಯತೀತವಾಗಿ ನಡೆಯಲಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಉದ್ಘಾಟನೆ ನೆರವೇರಿಸ ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಧ್ಯಕ್ಷತೆವಹಿಸಲಿದ್ದಾರೆ. ಪಂಚಲೋಹದಿಂದ ನಿರ್ಮಿಸಿರುವ ವಿಶ್ವಕರ್ಮರ 250 ಕೆಜಿ ತೂಕದ ಪುತ್ಥಳಿಯ ಮೆರವಣಿಗೆ ನಡೆಯಲಿದೆ ಎಂದರು. <br /> <br /> ಸಭೆಯಲ್ಲಿ ಮುಖಂಡರಾದ ಚಂದ್ರು, ಸತೀಶ್ಕುಮಾರ್, ಬಿ. ಮುರುಗೇಶ್ ಸೇರಿದಂತೆ ಸಮಾಜ ಬಾಂಧವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>