<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಪೂರ್ವಭಾವಿ ಸಭೆ ಈಚೆಗೆ ನಡೆಯಿತು.<br /> ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾ ಸಂಸ್ಥೆಯ ಮಹಾಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನಲ್ಲಿ ಸಂಘದ ಸ್ಥಾಪನೆ ಬೆಳವಣಿಗೆಗಳ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಯಿತು.<br /> <br /> ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಆರ್.ಎಂ. ಸ್ವಾಮಿ ಮಾತನಾಡಿ ತಾಲ್ಲೂಕಿನಲ್ಲಿ ಬಹಳ ದಿನಗಳ ಹಿಂದೆಯೇ ಸಂಘದ ಸ್ಥಾಪನೆಗೆ ಅಡಿಗಲ್ಲು ಹಾಕಬೇಕಾಗಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಗುಂಡ್ಲುಪೇಟೆಯಲ್ಲಿ ಸಂಘವು ಸ್ಥಾಪನೆಯಾಗುತ್ತಿರುವುದು ಖುಷಿ ತಂದಿದೆ ಎಂದರು.<br /> <br /> ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸಪ್ಪ ಮಾತನಾಡಿ ತಾಲ್ಲೂಕಿನಲ್ಲಿ ವೀರಶೈವ ನೌಕರರು ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು. ಸಮಾಜದ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯವೆಂದು ಸ್ವೀಕರಿಸಿ ಕೆಲಸ ನಿರ್ವಹಿಸಿ ಎಂದರು. ತಾಲ್ಲೂಕು ವೀರಶೈವ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಈ ಸಂದರ್ಭದಲ್ಲಿ ನಡೆಯಿತು<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಶಂಕರಪ್ಪ, ಶಿಕ್ಷಕ ಶಾಂತಮಲ್ಲಪ್ಪ, ದೈಹಿಕ ಶಿಕ್ಷಕ ಕೆ.ಸಿ. ರಾಜಪ್ಪ, ವಯಸ್ಕರ ಶಿಕ್ಷಣ ಸಂಯೋಜಕ ಪುಟ್ಟಬುದ್ಧಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಪೂರ್ವಭಾವಿ ಸಭೆ ಈಚೆಗೆ ನಡೆಯಿತು.<br /> ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾ ಸಂಸ್ಥೆಯ ಮಹಾಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನಲ್ಲಿ ಸಂಘದ ಸ್ಥಾಪನೆ ಬೆಳವಣಿಗೆಗಳ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಯಿತು.<br /> <br /> ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಆರ್.ಎಂ. ಸ್ವಾಮಿ ಮಾತನಾಡಿ ತಾಲ್ಲೂಕಿನಲ್ಲಿ ಬಹಳ ದಿನಗಳ ಹಿಂದೆಯೇ ಸಂಘದ ಸ್ಥಾಪನೆಗೆ ಅಡಿಗಲ್ಲು ಹಾಕಬೇಕಾಗಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಗುಂಡ್ಲುಪೇಟೆಯಲ್ಲಿ ಸಂಘವು ಸ್ಥಾಪನೆಯಾಗುತ್ತಿರುವುದು ಖುಷಿ ತಂದಿದೆ ಎಂದರು.<br /> <br /> ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸಪ್ಪ ಮಾತನಾಡಿ ತಾಲ್ಲೂಕಿನಲ್ಲಿ ವೀರಶೈವ ನೌಕರರು ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು. ಸಮಾಜದ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯವೆಂದು ಸ್ವೀಕರಿಸಿ ಕೆಲಸ ನಿರ್ವಹಿಸಿ ಎಂದರು. ತಾಲ್ಲೂಕು ವೀರಶೈವ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಈ ಸಂದರ್ಭದಲ್ಲಿ ನಡೆಯಿತು<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಶಂಕರಪ್ಪ, ಶಿಕ್ಷಕ ಶಾಂತಮಲ್ಲಪ್ಪ, ದೈಹಿಕ ಶಿಕ್ಷಕ ಕೆ.ಸಿ. ರಾಜಪ್ಪ, ವಯಸ್ಕರ ಶಿಕ್ಷಣ ಸಂಯೋಜಕ ಪುಟ್ಟಬುದ್ಧಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>