<p>ಕೊಳ್ಳೇಗಾಲ: ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಎಲ್ಲೆಂದರಲ್ಲಿ ಬಿದ್ದಿರುವ ತ್ಯಾಜ್ಯ, ಚರಂಡಿಯಲ್ಲೇ ಮಡುಗಟ್ಟಿ ನಿಂತಿರುವ ಕಲುಷಿತ ನೀರು...<br /> <br /> ಇದು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಶಿವನಸಮುದ್ರ ಗ್ರಾಮದ ಚಿತ್ರಣ. ಶಿವನಸಮುದ್ರ ಗ್ರಾಮದಲ್ಲಿ ಮಧ್ಯರಂಗನಾಥ ದೇವಾಲಯ, ಆದಿಶಕ್ತಿ ಮಾರಮ್ಮ ಹಾಗೂ ಶ್ರೀಚಕ್ರ ಹೊಂದಿರುವ ಪ್ರಸನ್ನ ಮೀನಾಕ್ಷಿ ದೇವಾಲಯಗಳಿದ್ದು ಪ್ರಸಿದ್ಧ ಯಾತ್ರಾಸ್ಥಳವಾಗಿದೆ.<br /> <br /> ಈ ಗ್ರಾಮದ ಜನತೆಗೆ ಮೂಲ ಸೌಲಭ್ಯಗಳನ್ನೇ ಕಲ್ಪಿಸಲು ಸಂಬಂಧಪಟ್ಟವರು ಮುಂದಾಗಿಲ್ಲ. ಈ ಗ್ರಾಮದ ಅನೇಕ ಬೀದಿಗಳಲ್ಲಿ ಚರಂಡಿಯನ್ನೇ ನಿರ್ಮಿಸದ ಕಾರಣ ರಸ್ತೆಯ ಮಧ್ಯದಲ್ಲೇ ತ್ಯಾಜ್ಯ ನೀರು ಹರಿಯುತ್ತಿದೆ. ಕೊಚ್ಚೆ ನೀರಿನಿಂದ ಸೊಳ್ಳೆ ಕಾಟವೂ ಹೆಚ್ಚಾಗಿ, ರೋಗ ರುಜಿನಗಳ ಭಯ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ.<br /> <br /> ‘ಗ್ರಾಮದೊಳಗಿನ ರಸ್ತೆ ವ್ಯವಸ್ಥೆ ತೀರಾ ಹದಗೆಟ್ಟಿದೆ. ಮಳೆಗಾಲದಲ್ಲಿ ಈ ರಸ್ತೆಗಳು ಕೆಸರುಮಯವಾಗಿ ಜನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪ್ರಸಿದ್ಧ ಯಾತ್ರಾಸ್ಥಳವೆನಿಸಿರುವ ಈ ಗ್ರಾಮದ ಜನತೆಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ’ ಎಂಬುದು ಇಲ್ಲಿನ ನಾಗರಿಕರಾದ ಮುತ್ತುರಾಜು, ಮಂಟಿ ಅವರ ದೂರು.<br /> <br /> ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ಇಲ್ಲಿನ ಜನರ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಗ್ರಾಮದ ಮಗ್ಗುಲಲ್ಲೇ ಕಾವೇರಿ ಹರಿಯುತ್ತಿದ್ದರೂ ಈ ಜನರು ಮಾತ್ರ ನೀರಿಗೆ ಪರದಾಡುವ ಸ್ಥಿತಿ ಇದೆ.<br /> <br /> ಗ್ರಾಮದಲ್ಲಿ ಚರಂಡಿ ನಿರ್ಮಿಸಿ ರಸ್ತೆ ಮೇಲೆ ಹರಿಯುವ ತ್ಯಾಜ್ಯ ನೀರು ತಪ್ಪಿಸಲು ಹಾಗೂ ಸಮರ್ಪಕ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಎಲ್ಲೆಂದರಲ್ಲಿ ಬಿದ್ದಿರುವ ತ್ಯಾಜ್ಯ, ಚರಂಡಿಯಲ್ಲೇ ಮಡುಗಟ್ಟಿ ನಿಂತಿರುವ ಕಲುಷಿತ ನೀರು...<br /> <br /> ಇದು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಶಿವನಸಮುದ್ರ ಗ್ರಾಮದ ಚಿತ್ರಣ. ಶಿವನಸಮುದ್ರ ಗ್ರಾಮದಲ್ಲಿ ಮಧ್ಯರಂಗನಾಥ ದೇವಾಲಯ, ಆದಿಶಕ್ತಿ ಮಾರಮ್ಮ ಹಾಗೂ ಶ್ರೀಚಕ್ರ ಹೊಂದಿರುವ ಪ್ರಸನ್ನ ಮೀನಾಕ್ಷಿ ದೇವಾಲಯಗಳಿದ್ದು ಪ್ರಸಿದ್ಧ ಯಾತ್ರಾಸ್ಥಳವಾಗಿದೆ.<br /> <br /> ಈ ಗ್ರಾಮದ ಜನತೆಗೆ ಮೂಲ ಸೌಲಭ್ಯಗಳನ್ನೇ ಕಲ್ಪಿಸಲು ಸಂಬಂಧಪಟ್ಟವರು ಮುಂದಾಗಿಲ್ಲ. ಈ ಗ್ರಾಮದ ಅನೇಕ ಬೀದಿಗಳಲ್ಲಿ ಚರಂಡಿಯನ್ನೇ ನಿರ್ಮಿಸದ ಕಾರಣ ರಸ್ತೆಯ ಮಧ್ಯದಲ್ಲೇ ತ್ಯಾಜ್ಯ ನೀರು ಹರಿಯುತ್ತಿದೆ. ಕೊಚ್ಚೆ ನೀರಿನಿಂದ ಸೊಳ್ಳೆ ಕಾಟವೂ ಹೆಚ್ಚಾಗಿ, ರೋಗ ರುಜಿನಗಳ ಭಯ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ.<br /> <br /> ‘ಗ್ರಾಮದೊಳಗಿನ ರಸ್ತೆ ವ್ಯವಸ್ಥೆ ತೀರಾ ಹದಗೆಟ್ಟಿದೆ. ಮಳೆಗಾಲದಲ್ಲಿ ಈ ರಸ್ತೆಗಳು ಕೆಸರುಮಯವಾಗಿ ಜನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪ್ರಸಿದ್ಧ ಯಾತ್ರಾಸ್ಥಳವೆನಿಸಿರುವ ಈ ಗ್ರಾಮದ ಜನತೆಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ’ ಎಂಬುದು ಇಲ್ಲಿನ ನಾಗರಿಕರಾದ ಮುತ್ತುರಾಜು, ಮಂಟಿ ಅವರ ದೂರು.<br /> <br /> ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ಇಲ್ಲಿನ ಜನರ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಗ್ರಾಮದ ಮಗ್ಗುಲಲ್ಲೇ ಕಾವೇರಿ ಹರಿಯುತ್ತಿದ್ದರೂ ಈ ಜನರು ಮಾತ್ರ ನೀರಿಗೆ ಪರದಾಡುವ ಸ್ಥಿತಿ ಇದೆ.<br /> <br /> ಗ್ರಾಮದಲ್ಲಿ ಚರಂಡಿ ನಿರ್ಮಿಸಿ ರಸ್ತೆ ಮೇಲೆ ಹರಿಯುವ ತ್ಯಾಜ್ಯ ನೀರು ತಪ್ಪಿಸಲು ಹಾಗೂ ಸಮರ್ಪಕ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>