ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಸಾಲಮನ್ನಾ ವಿಚಾರದಲ್ಲಿ ನಾಟಕ ವಾಡುತ್ತಿವೆ. ಸಂಪೂರ್ಣ ಸಾಲಮನ್ನಾ ಮಾಡಲು ಮುಂದಾಗಬೇಕು. 70 ಉದ್ಯಮಿಗಳ ₹ 6 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಕಬ್ಬು ಬೆಳೆಗಾರರ ಸಂಘದ ಕಾರ್ಯ ಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮುಖಂಡರಾದ ಮಹದೇವಸ್ವಾಮಿ, ಕುಂತೂರು ಪ್ರಭುಸ್ವಾಮಿ ಇದ್ದರು.