<p>ಚಾಮರಾಜನಗರ: `ಆಧಾರ್~ ಗುರುತಿನ ಚೀಟಿಯಿಂದ ಸಾಮಾಜಿಕ ಯೋಜನೆಗಳ ಸವಲತ್ತಿನ ದುರ್ಬಳಕೆ ತಡೆಗಟ್ಟಲು ಸಾಧ್ಯ ಎಂದು ರಾಜ್ಯ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಎಸ್. ರವೀಂದ್ರನ್ ಹೇಳಿದರು. <br /> <br /> ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಬುಧವಾರ `ಆಧಾರ್~ ಗುರುತಿನ ಚೀಟಿ ನೋಂದಣಿ ಮತ್ತು ವಿತರಣೆ ಸಂಬಂಧ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಆಧಾರ್ ಚೀಟಿ ಬಳಸಬಹುದು. ಇದರಿಂದ ಸರ್ಕಾರದ ಸಾಮಾಜಿಕ ಯೋಜನೆಗಳ ಸವಲತ್ತು ಅನರ್ಹರ ಪಾಲಾಗುವುದು ತಪ್ಪುತ್ತದೆ. ನಕಲಿ ಪ್ರಮಾಣ ಪತ್ರದ ಹಾವಳಿಗೆ ಕಡಿ ವಾಣ ಹಾಕಬ ಹುದು ಎಂದರು. <br /> <br /> ಆಧಾರ್ ಕಾರ್ಡ್ ನೋಂದಣಿ ಕಾರ್ಯಕ್ರಮದ ಅನುಷ್ಠಾನ ಕುರಿತು ಅಧಿಕಾರಿಗಳು ಹೆಚ್ಚಿನ ತಿಳಿವಳಿಕೆ ಹೊಂದಬೇಕು. ಯಾವುದೇ, ಲೋಪದೋಷ ಇಲ್ಲದಂತೆ ನೋಂದಣಿ ಕಾರ್ಯ ಜರುಗಲು ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು. <br /> <br /> ಶಾಸಕರು, ಸಂಸದರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗೆಜಿಟೆಡ್ ಅಧಿಕಾರಿಗಳು ಆಧಾರ್ ಕಾರ್ಡ್ ನೋಂದಣಿಗೆ ಬೇಕಾಗುವ ವಾಸಸ್ಥಳದ ದೃಢಿ ೀಕರಣ ಮಾಡುವ ಅಧಿಕಾರ ಹೊಂದಿರುತ್ತಾರೆ. ನೋಂದಣಿ ಸಂದರ್ಭದಲ್ಲಿ ಅನುಸರಿಸಬೇಕಾದ ಇತರೇ ಕ್ರಮದ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. <br /> <br /> ಈಗಾಗಲೇ, ಆಧಾರ್ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಜಿಲ್ಲೆಯಲ್ಲಿ 6 ತಿಂಗಳೊಳಗೆ ನೋಂದಣಿ ಹಾಗೂ ವಿತರಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಸರ್ಕಾರದ ಈ ಮಹತ್ವಪೂರ್ಣವಾದ ಕಾರ್ಯಕ್ರಮ ನಿಗದಿತ ಅವಧಿಯೊಳಗೆ ಫಲಪ್ರದವಾಗಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಶ್ರಮವಹಿಸಬೇಕು ಎಂದು ಕೋರಿದರು. <br /> <br /> ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಕೆ. ಅಮರನಾರಾಯಣ, ಆಧಾರ್ ಯೋಜನೆಯ ನಿರ್ದೇಶಕ ಟಿ.ಪಿ. ಪ್ರಭಾಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ. ಸುಂದರನಾಯ್ಕ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್. ಚಂದ್ರಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರ ಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಆಧಾರ್~ ಗುರುತಿನ ಚೀಟಿಯಿಂದ ಸಾಮಾಜಿಕ ಯೋಜನೆಗಳ ಸವಲತ್ತಿನ ದುರ್ಬಳಕೆ ತಡೆಗಟ್ಟಲು ಸಾಧ್ಯ ಎಂದು ರಾಜ್ಯ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಎಸ್. ರವೀಂದ್ರನ್ ಹೇಳಿದರು. <br /> <br /> ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಬುಧವಾರ `ಆಧಾರ್~ ಗುರುತಿನ ಚೀಟಿ ನೋಂದಣಿ ಮತ್ತು ವಿತರಣೆ ಸಂಬಂಧ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಆಧಾರ್ ಚೀಟಿ ಬಳಸಬಹುದು. ಇದರಿಂದ ಸರ್ಕಾರದ ಸಾಮಾಜಿಕ ಯೋಜನೆಗಳ ಸವಲತ್ತು ಅನರ್ಹರ ಪಾಲಾಗುವುದು ತಪ್ಪುತ್ತದೆ. ನಕಲಿ ಪ್ರಮಾಣ ಪತ್ರದ ಹಾವಳಿಗೆ ಕಡಿ ವಾಣ ಹಾಕಬ ಹುದು ಎಂದರು. <br /> <br /> ಆಧಾರ್ ಕಾರ್ಡ್ ನೋಂದಣಿ ಕಾರ್ಯಕ್ರಮದ ಅನುಷ್ಠಾನ ಕುರಿತು ಅಧಿಕಾರಿಗಳು ಹೆಚ್ಚಿನ ತಿಳಿವಳಿಕೆ ಹೊಂದಬೇಕು. ಯಾವುದೇ, ಲೋಪದೋಷ ಇಲ್ಲದಂತೆ ನೋಂದಣಿ ಕಾರ್ಯ ಜರುಗಲು ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು. <br /> <br /> ಶಾಸಕರು, ಸಂಸದರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗೆಜಿಟೆಡ್ ಅಧಿಕಾರಿಗಳು ಆಧಾರ್ ಕಾರ್ಡ್ ನೋಂದಣಿಗೆ ಬೇಕಾಗುವ ವಾಸಸ್ಥಳದ ದೃಢಿ ೀಕರಣ ಮಾಡುವ ಅಧಿಕಾರ ಹೊಂದಿರುತ್ತಾರೆ. ನೋಂದಣಿ ಸಂದರ್ಭದಲ್ಲಿ ಅನುಸರಿಸಬೇಕಾದ ಇತರೇ ಕ್ರಮದ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. <br /> <br /> ಈಗಾಗಲೇ, ಆಧಾರ್ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಜಿಲ್ಲೆಯಲ್ಲಿ 6 ತಿಂಗಳೊಳಗೆ ನೋಂದಣಿ ಹಾಗೂ ವಿತರಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಸರ್ಕಾರದ ಈ ಮಹತ್ವಪೂರ್ಣವಾದ ಕಾರ್ಯಕ್ರಮ ನಿಗದಿತ ಅವಧಿಯೊಳಗೆ ಫಲಪ್ರದವಾಗಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಶ್ರಮವಹಿಸಬೇಕು ಎಂದು ಕೋರಿದರು. <br /> <br /> ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಕೆ. ಅಮರನಾರಾಯಣ, ಆಧಾರ್ ಯೋಜನೆಯ ನಿರ್ದೇಶಕ ಟಿ.ಪಿ. ಪ್ರಭಾಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ. ಸುಂದರನಾಯ್ಕ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್. ಚಂದ್ರಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರ ಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>