<p><strong>ಯಳಂದೂರು: </strong>ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಬಿಳಿಗಿರಿರಂಗನಬೆಟ್ಟದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಹಣ ಗುಳುಂ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯರಗಂಬಳ್ಳಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಈ ಪ್ರದೇಶದಲ್ಲಿ ನೂರಕ್ಕೂ ಅಧಿಕ ಕೈಪಂಪುಗಳಿವೆ. ಆದರೆ ಕಾರ್ಯ ನಿರ್ವಹಿಸುತ್ತಿರುವ ಸಂಖ್ಯೆ 20 ರ ಆಸುಪಾಸಿನಲ್ಲಿದೆ.<br /> <br /> ಕೇವಲ ಬಿಲ್ಗಳನ್ನು ಪಾಸು ಮಾಡಿಕೊಳ್ಳುವು ದಕ್ಕಾಗಿಯೇ ಪೋಡುಗಳಲ್ಲಿ, ರಸ್ತೆಗಳಲ್ಲಿ ಜನರು ಓಡಾಡದ ಸ್ಥಳಗಳಲ್ಲೂ ಬೋರ್ವೆಲ್ಗಳನ್ನು ಕೊರೆಯಲಾಗಿದೆ. ನೀರು ಬಂತೋ, ಬಂದಿಲ್ಲವೋ, ಉಪಯೋಗವಿದೆಯೋ, ಇಲ್ಲವೋ ಎನ್ನುವುದರ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿಲ್ಲ ಎಂಬುದು ಗ್ರಾಮದ ಮಾದೇಗೌಡ, ಜಡೇಗೌಡ ಸೇರಿದಂತೆ ಹಲವರ ದೂರು.<br /> <br /> ಗಂಗಾಧರೇಶ್ವರ ದೇಗುಲದ ಸುತ್ತಲೇ 5ಕ್ಕೂ ಅಧಿಕ ಕೈಪಂಪುಗಳಿವೆ. ಆದರೆ ಇದರಲ್ಲಿ ಯಾವುದೂ ಕಾರ್ಯನಿರ್ವಸುತ್ತಿಲ್ಲ. ಆದ್ದರಿಂದ ಇಲ್ಲಿಗೆ ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತದೆ ಎಂಬುದು ಶಿವನಾಗಪ್ಪ, ನಂದೀಶ್ ಅವರ ದೂರು. ಇಲ್ಲಿರುವ ಬೋರ್ವೆಲ್ಗಳು ಕೆಟ್ಟು ನಿಂತು ತಿಂಗಳುಗಳು ಉರುಳಿದರೂ ಯಾರೂ ಕೂಡ ದುರಸ್ತಿ ಮಾಡಿಸಿಲ್ಲ. ಈ ಬಗ್ಗೆ ಪಂಚಾಯಿತಿಯ ಕಚೇರಿಯಲ್ಲಿ ದೂರನ್ನು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಯದರ್ಶಿ ಇಲ್ಲಿಗೆ ಬರುವುದೇ ಇಲ್ಲ ಎಂಬುದಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ದಾಸೇಗೌಡರು ‘ಪ್ರಜಾವಾಣಿ’ಗೆ ತಿಳಿಸಿದರು. ಈಗಲಾದರೂ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳುವರೇ ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು: </strong>ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಬಿಳಿಗಿರಿರಂಗನಬೆಟ್ಟದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಹಣ ಗುಳುಂ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯರಗಂಬಳ್ಳಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಈ ಪ್ರದೇಶದಲ್ಲಿ ನೂರಕ್ಕೂ ಅಧಿಕ ಕೈಪಂಪುಗಳಿವೆ. ಆದರೆ ಕಾರ್ಯ ನಿರ್ವಹಿಸುತ್ತಿರುವ ಸಂಖ್ಯೆ 20 ರ ಆಸುಪಾಸಿನಲ್ಲಿದೆ.<br /> <br /> ಕೇವಲ ಬಿಲ್ಗಳನ್ನು ಪಾಸು ಮಾಡಿಕೊಳ್ಳುವು ದಕ್ಕಾಗಿಯೇ ಪೋಡುಗಳಲ್ಲಿ, ರಸ್ತೆಗಳಲ್ಲಿ ಜನರು ಓಡಾಡದ ಸ್ಥಳಗಳಲ್ಲೂ ಬೋರ್ವೆಲ್ಗಳನ್ನು ಕೊರೆಯಲಾಗಿದೆ. ನೀರು ಬಂತೋ, ಬಂದಿಲ್ಲವೋ, ಉಪಯೋಗವಿದೆಯೋ, ಇಲ್ಲವೋ ಎನ್ನುವುದರ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿಲ್ಲ ಎಂಬುದು ಗ್ರಾಮದ ಮಾದೇಗೌಡ, ಜಡೇಗೌಡ ಸೇರಿದಂತೆ ಹಲವರ ದೂರು.<br /> <br /> ಗಂಗಾಧರೇಶ್ವರ ದೇಗುಲದ ಸುತ್ತಲೇ 5ಕ್ಕೂ ಅಧಿಕ ಕೈಪಂಪುಗಳಿವೆ. ಆದರೆ ಇದರಲ್ಲಿ ಯಾವುದೂ ಕಾರ್ಯನಿರ್ವಸುತ್ತಿಲ್ಲ. ಆದ್ದರಿಂದ ಇಲ್ಲಿಗೆ ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತದೆ ಎಂಬುದು ಶಿವನಾಗಪ್ಪ, ನಂದೀಶ್ ಅವರ ದೂರು. ಇಲ್ಲಿರುವ ಬೋರ್ವೆಲ್ಗಳು ಕೆಟ್ಟು ನಿಂತು ತಿಂಗಳುಗಳು ಉರುಳಿದರೂ ಯಾರೂ ಕೂಡ ದುರಸ್ತಿ ಮಾಡಿಸಿಲ್ಲ. ಈ ಬಗ್ಗೆ ಪಂಚಾಯಿತಿಯ ಕಚೇರಿಯಲ್ಲಿ ದೂರನ್ನು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಯದರ್ಶಿ ಇಲ್ಲಿಗೆ ಬರುವುದೇ ಇಲ್ಲ ಎಂಬುದಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ದಾಸೇಗೌಡರು ‘ಪ್ರಜಾವಾಣಿ’ಗೆ ತಿಳಿಸಿದರು. ಈಗಲಾದರೂ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳುವರೇ ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>