<p><strong>ಗುಂಡ್ಲುಪೇಟೆ</strong>: ಫೆಬ್ರುವರಿಯಲ್ಲಿ ನಡೆಯಲಿರುವ ಹುಲಿಗಣತಿಗೆ ಪೂರ್ವಭಾವಿಯಾಗಿ ಬಂಡೀಪುರ ಉದ್ಯಾನದಲ್ಲಿ ಇತ್ತೀಚೆಗೆ ಕಾರ್ಯಾಗಾರ ನಡೆಯಿತು.</p>.<p>ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ಹಾಗೂ ಮಹಾರಾ ಷ್ಟ್ರದ 100ಕ್ಕೂ ಹೆಚ್ಚು ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅಧಿಕಾರಿಗಳು ಕ್ಯಾಮೆರಾ ಟ್ರ್ಯಾಪಿಂಗ್ ಮೂಲಕ ನಿಖರವಾಗಿ ಗಣತಿ ನಡೆಸುವ ಬಗ್ಗೆ ತರಬೇತಿ ನೀಡಿದರು.</p>.<p>ಬಂಡೀಪುರದಲ್ಲಿ 2014ರಲ್ಲಿ ಹುಲಿ ಗಣತಿ ಕಾರ್ಯ ನಡೆದಿತ್ತು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಗಣತಿ ಕಾರ್ಯದಲ್ಲಿ ಆಧುನಿಕ ವಿಧಾನದ ಮೂಲಕ ಏಕಕಾಲದಲ್ಲಿ ಮುಖ್ಯ ಕೇಂದ್ರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.</p>.<p>ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿ ಕಾರದ ಐಜಿಎಫ್ ಸೋಮಶೇಖರ್, ಎಐಜಿಎಫ್ ರಾಜೇಂದ್ರ ಗಾರವಾಡ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನತಿ ಶ್ರೀಧರ್, ಎಪಿಸಿಎಫ್ ಜಯರಾಂ, ಎಫ್ಡಿಪಿಟಿ ಮನೋಜಕುಮಾರ್, ಬಂಡೀಪುರ ಸಿ.ಎಫ್ ಅಂಬಾಡಿ ಮಾಧವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಫೆಬ್ರುವರಿಯಲ್ಲಿ ನಡೆಯಲಿರುವ ಹುಲಿಗಣತಿಗೆ ಪೂರ್ವಭಾವಿಯಾಗಿ ಬಂಡೀಪುರ ಉದ್ಯಾನದಲ್ಲಿ ಇತ್ತೀಚೆಗೆ ಕಾರ್ಯಾಗಾರ ನಡೆಯಿತು.</p>.<p>ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ಹಾಗೂ ಮಹಾರಾ ಷ್ಟ್ರದ 100ಕ್ಕೂ ಹೆಚ್ಚು ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅಧಿಕಾರಿಗಳು ಕ್ಯಾಮೆರಾ ಟ್ರ್ಯಾಪಿಂಗ್ ಮೂಲಕ ನಿಖರವಾಗಿ ಗಣತಿ ನಡೆಸುವ ಬಗ್ಗೆ ತರಬೇತಿ ನೀಡಿದರು.</p>.<p>ಬಂಡೀಪುರದಲ್ಲಿ 2014ರಲ್ಲಿ ಹುಲಿ ಗಣತಿ ಕಾರ್ಯ ನಡೆದಿತ್ತು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಗಣತಿ ಕಾರ್ಯದಲ್ಲಿ ಆಧುನಿಕ ವಿಧಾನದ ಮೂಲಕ ಏಕಕಾಲದಲ್ಲಿ ಮುಖ್ಯ ಕೇಂದ್ರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.</p>.<p>ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿ ಕಾರದ ಐಜಿಎಫ್ ಸೋಮಶೇಖರ್, ಎಐಜಿಎಫ್ ರಾಜೇಂದ್ರ ಗಾರವಾಡ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನತಿ ಶ್ರೀಧರ್, ಎಪಿಸಿಎಫ್ ಜಯರಾಂ, ಎಫ್ಡಿಪಿಟಿ ಮನೋಜಕುಮಾರ್, ಬಂಡೀಪುರ ಸಿ.ಎಫ್ ಅಂಬಾಡಿ ಮಾಧವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>