ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಕ್ಷ್ಮೀ ಹೆಬ್ಬಾಳ್ಕರ್, ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ವೇಳೆ ಬಹಿರಂಗವಾಗಿ ಹಣ ಹಂಚಿದ್ದರು. ಈಗ ಲಾರಿಗಳಲ್ಲಿ ಕುಕ್ಕರ್ಗಳನ್ನು ತಂದು ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು. ಅವರು ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು’ ಎಂದು ಆಗ್ರಹಿಸಿದರು.