ರಾಜೀನಾಮೆ ಕಡತಕ್ಕೆ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಈ ಹಿಂದೆಯೇ ಒಪ್ಪಿಗೆ ನೀಡಿತ್ತು. ಆದರೆ, ಅಕ್ರಮ ಆಸ್ತಿ ಗಳಿಕೆ ಆಧಾರದಲ್ಲಿ ಲೋಕಾಯುಕ್ತ ದಾಳಿ ಮತ್ತು ಬಳ್ಳಾರಿ ಅಕ್ರಮ ಗಣಿ ಪ್ರಕರಣದಲ್ಲಿ ಭಾಗಿಯಾದ ಕುರಿತು ಲೋಕಾಯುಕ್ತ ಜಂಟಿ ಇಲಾಖಾ ವಿಚಾರಣೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡಿರುವುದರಿಂದ ರಾಜೀನಾಮೆ ಅಂಗೀಕರಿಸುವುದು ಸಮಂಜಸ ಅಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯ ನೀಡಿತ್ತು.