<p><strong>ಚಾಮರಾಜನಗರ: </strong>ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ವ್ಯವಸ್ಥಾಪಕಿ (ಡಿಆರ್ಎಂ) ಅಪರ್ಣಾ ಗರ್ಗ್ಅವರು ಶನಿವಾರ ಚಾಮರಾಜನಗರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು.</p>.<p>ನಿಲ್ದಾಣದಲ್ಲಿರುವ ಮೂಲಸೌಕರ್ಯ ಹಾಗೂ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳು, ಪ್ರಯಾಣಿಕರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು.</p>.<p class="Subhead"><strong>ದೂರುಗಳ ಮಹಾಪೂರ:</strong> ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಅವರು ನಂತರ ನಿಲ್ದಾಣದ ಆಸುಪಾಸು ಮತ್ತು ವಾಹನಗಳ ನಿಲ್ದಾಣವನ್ನು ಪರಿಶೀಲಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೈಲ್ವೆಪ್ರಯಾಣಿಕರು ಹಾಗೂ ಸ್ಥಳೀಯರು ನಿಲ್ದಾಣದಲ್ಲಿರುವ ಸಮಸ್ಯೆಗಳ ಪಟ್ಟಿಯನ್ನೇ ತೆರೆದಿಟ್ಟರು.</p>.<p>ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸರಿಯಾಗಿಲ್ಲ. ನಿಲ್ದಾಣದ ಎದುರಿಗೆ ಇರುವ ಖಾಲಿ ಜಾಗ ಗುಂಡಿಗಳಿಂದ ಕೂಡಿದ್ದು ಓಡಾಡುವುದಕ್ಕೆ ಕಷ್ಟವಾಗುತ್ತದೆ. ಇಲ್ಲಿನ ಆವರಣದಲ್ಲಿ ಬೀದಿದೀಪಗಳ ವ್ಯವಸ್ಥೆ ಸಮರ್ಪಕವಾಗಿಲ್ಲದೇ ಇರುವುದರಿಂದ ರಾತ್ರಿ ಹೊತ್ತು ಸಂಚರಿಸುವುದಕ್ಕೆ ಭಯವಾಗುತ್ತದೆ ಎಂದು ಪ್ರಯಾಣಿಕರು ಡಿಆರ್ಎಂ ಅವರಿಗೆ ದೂರು ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಅಪರ್ಣಾ ಗರ್ಗ್, ‘ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿಯೇ ಇಲ್ಲಿಗೆ ಬಂದಿದ್ದೇನೆ’ ಎಂದರು.</p>.<p class="Subhead"><strong>ಶೌಚಾಲಯ ಇಲ್ಲ:</strong> ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಕ್ತ ಶೌಚಾಲಯದ ವ್ಯವಸ್ಥೆ ಇಲ್ಲ. ಮಳೆ ಬಂದ ಸಂದರ್ಭದಲ್ಲಿ ಪ್ಲಾಟ್ಫಾರಂ ಒಳಗೇ ನೀರು ಬರುತ್ತದೆ ಎಂದು ಪ್ರಯಾಣಿಕರು ಡಿಆರ್ಎಂ ಅವರಿಗೆ ತಿಳಿಸಿದರು.</p>.<p>ಸ್ಥಳೀಯ ಅಧಿಕಾರಿಗಳನ್ನು ಕರೆದ ಅವರು, ತಕ್ಷಣವೇ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ‘ನಮಗೆ ಒಂದೆರಡು ತಿಂಗಳು ಸಮಯ ಕೊಡಿ. ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p class="Subhead"><strong>ಸ್ವಚ್ಛತೆ ಕಾಪಾಡಿ: </strong>ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ರೈಲುಗಳಲ್ಲಿನ ಅನೈರ್ಮಲ್ಯವನ್ನೂ ಸ್ಥಳೀಯರು ಡಿಆರ್ಎಂ ಗಮನಕ್ಕೆ ತಂದರು.ರೈಲುಗಳು ಸ್ವಚ್ಛವಾಗಿರುವುದಿಲ್ಲ. ಬೋಗಿಗಳಲ್ಲಿನ ಶೌಚಾಲಯವೂ ಅನೈರ್ಮಲ್ಯದಿಂದ ಕೂಡಿರುತ್ತದೆ ಎಂದು ದೂರಿದರು.</p>.<p>ಇದಕ್ಕೆ ಸ್ಪಂದಿಸಿದ ಅಪರ್ಣಾ,ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p class="Briefhead"><strong>4 ರಿಂದ ವೈ–ಫೈ ಸೌಲಭ್ಯ:</strong>ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ ಸೆಪ್ಟೆಂಬರ್ 4ರಿಂದ ಪ್ರಯಾಣಿಕರಿಗೆ ವೈ–ಫೈ ಸೌಲಭ್ಯ ಸಿಗಲಿದೆ.</p>.<p>ರೈಲ್ವೆ ಇಲಾಖೆಯು ಈಗಾಗಲೇ ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗಾಗಿ ವೈ–ಫೈ ಸೌಲಭ್ಯ ಕಲ್ಪಿಸಿದೆ.ಚಾಮರಾಜನಗರದಲ್ಲಿ ಇದುವರೆಗೆ ಲಭ್ಯವಿರಲಿಲ್ಲ. ಈಗ ಆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದುರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ವಿಶೇಷ ಶಿಬಿರ</strong>: ಈ ಮಧ್ಯೆ, ಸ್ಥಳೀಯ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಗಾಗಿ ರೈಲ್ವೆ ಇಲಾಖೆಯು ಸೆಪ್ಟೆಂಬರ್ 4ರಂದು ಆರೋಗ್ಯ, ಕೌಶಲಾವೃದ್ಧಿ ಶಿಬಿರಗಳನ್ನು ಹಮ್ಮಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ವ್ಯವಸ್ಥಾಪಕಿ (ಡಿಆರ್ಎಂ) ಅಪರ್ಣಾ ಗರ್ಗ್ಅವರು ಶನಿವಾರ ಚಾಮರಾಜನಗರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು.</p>.<p>ನಿಲ್ದಾಣದಲ್ಲಿರುವ ಮೂಲಸೌಕರ್ಯ ಹಾಗೂ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳು, ಪ್ರಯಾಣಿಕರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು.</p>.<p class="Subhead"><strong>ದೂರುಗಳ ಮಹಾಪೂರ:</strong> ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಅವರು ನಂತರ ನಿಲ್ದಾಣದ ಆಸುಪಾಸು ಮತ್ತು ವಾಹನಗಳ ನಿಲ್ದಾಣವನ್ನು ಪರಿಶೀಲಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೈಲ್ವೆಪ್ರಯಾಣಿಕರು ಹಾಗೂ ಸ್ಥಳೀಯರು ನಿಲ್ದಾಣದಲ್ಲಿರುವ ಸಮಸ್ಯೆಗಳ ಪಟ್ಟಿಯನ್ನೇ ತೆರೆದಿಟ್ಟರು.</p>.<p>ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸರಿಯಾಗಿಲ್ಲ. ನಿಲ್ದಾಣದ ಎದುರಿಗೆ ಇರುವ ಖಾಲಿ ಜಾಗ ಗುಂಡಿಗಳಿಂದ ಕೂಡಿದ್ದು ಓಡಾಡುವುದಕ್ಕೆ ಕಷ್ಟವಾಗುತ್ತದೆ. ಇಲ್ಲಿನ ಆವರಣದಲ್ಲಿ ಬೀದಿದೀಪಗಳ ವ್ಯವಸ್ಥೆ ಸಮರ್ಪಕವಾಗಿಲ್ಲದೇ ಇರುವುದರಿಂದ ರಾತ್ರಿ ಹೊತ್ತು ಸಂಚರಿಸುವುದಕ್ಕೆ ಭಯವಾಗುತ್ತದೆ ಎಂದು ಪ್ರಯಾಣಿಕರು ಡಿಆರ್ಎಂ ಅವರಿಗೆ ದೂರು ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಅಪರ್ಣಾ ಗರ್ಗ್, ‘ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿಯೇ ಇಲ್ಲಿಗೆ ಬಂದಿದ್ದೇನೆ’ ಎಂದರು.</p>.<p class="Subhead"><strong>ಶೌಚಾಲಯ ಇಲ್ಲ:</strong> ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಕ್ತ ಶೌಚಾಲಯದ ವ್ಯವಸ್ಥೆ ಇಲ್ಲ. ಮಳೆ ಬಂದ ಸಂದರ್ಭದಲ್ಲಿ ಪ್ಲಾಟ್ಫಾರಂ ಒಳಗೇ ನೀರು ಬರುತ್ತದೆ ಎಂದು ಪ್ರಯಾಣಿಕರು ಡಿಆರ್ಎಂ ಅವರಿಗೆ ತಿಳಿಸಿದರು.</p>.<p>ಸ್ಥಳೀಯ ಅಧಿಕಾರಿಗಳನ್ನು ಕರೆದ ಅವರು, ತಕ್ಷಣವೇ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ‘ನಮಗೆ ಒಂದೆರಡು ತಿಂಗಳು ಸಮಯ ಕೊಡಿ. ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p class="Subhead"><strong>ಸ್ವಚ್ಛತೆ ಕಾಪಾಡಿ: </strong>ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ರೈಲುಗಳಲ್ಲಿನ ಅನೈರ್ಮಲ್ಯವನ್ನೂ ಸ್ಥಳೀಯರು ಡಿಆರ್ಎಂ ಗಮನಕ್ಕೆ ತಂದರು.ರೈಲುಗಳು ಸ್ವಚ್ಛವಾಗಿರುವುದಿಲ್ಲ. ಬೋಗಿಗಳಲ್ಲಿನ ಶೌಚಾಲಯವೂ ಅನೈರ್ಮಲ್ಯದಿಂದ ಕೂಡಿರುತ್ತದೆ ಎಂದು ದೂರಿದರು.</p>.<p>ಇದಕ್ಕೆ ಸ್ಪಂದಿಸಿದ ಅಪರ್ಣಾ,ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p class="Briefhead"><strong>4 ರಿಂದ ವೈ–ಫೈ ಸೌಲಭ್ಯ:</strong>ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ ಸೆಪ್ಟೆಂಬರ್ 4ರಿಂದ ಪ್ರಯಾಣಿಕರಿಗೆ ವೈ–ಫೈ ಸೌಲಭ್ಯ ಸಿಗಲಿದೆ.</p>.<p>ರೈಲ್ವೆ ಇಲಾಖೆಯು ಈಗಾಗಲೇ ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗಾಗಿ ವೈ–ಫೈ ಸೌಲಭ್ಯ ಕಲ್ಪಿಸಿದೆ.ಚಾಮರಾಜನಗರದಲ್ಲಿ ಇದುವರೆಗೆ ಲಭ್ಯವಿರಲಿಲ್ಲ. ಈಗ ಆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದುರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ವಿಶೇಷ ಶಿಬಿರ</strong>: ಈ ಮಧ್ಯೆ, ಸ್ಥಳೀಯ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಗಾಗಿ ರೈಲ್ವೆ ಇಲಾಖೆಯು ಸೆಪ್ಟೆಂಬರ್ 4ರಂದು ಆರೋಗ್ಯ, ಕೌಶಲಾವೃದ್ಧಿ ಶಿಬಿರಗಳನ್ನು ಹಮ್ಮಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>