ಕೊಳ್ಳೇಗಾಲ: ‘ಬಿಎಸ್ಪಿ ಮತ್ತು ಜೆಡಿಎಸ್ ಮೈತ್ರಿಯ ಕಾರ್ಯಕ್ರಮದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಾಪಾಪಾಂಡುಗೆ ಹೋಲಿಕೆ ಮಾಡಿ ಮಾತನಾಡಿರುವುದು ಸರಿಯಲ್ಲ’ ಎಂದು ಸಂಸದ ಆರ್.ಧ್ರುವನಾರಾಯಣ ಆರೋಪಿಸಿದರು.ಈ ಹಿಂದೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ, ಈಗ ಅಧ್ಯಕ್ಷರಾಗಿದ್ದಾರೆ. ಅವರು ಯುಪಿಎ ಸರ್ಕಾರವಿದ್ದಾಗಲೂ ಸಹ ಸಚಿವ ಸ್ಥಾನಕ್ಕೆ ಆಸೆ ಪಡದೆ ದೇಶದ ಜನರ ಹಿತ ಕಾಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬುಧುವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.