‘ಸುಪ್ರೀಂ’ ಆದೇಶ ಏನು?: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ದೂರು ಸಲ್ಲಿಕೆಯಾದರೆ ತಕ್ಷಣವೇ ಎಫ್ಐಆರ್ ದಾಖಲಿಸಬಾರದು ಮತ್ತು ಆರೋಪಿಗಳನ್ನು ಬಂಧಿಸಬಾರದು. ತನಿಖೆ ನಡೆಸಿದ ಬಳಿಕವೇ ಕ್ರಮ ಕೈಗೊಳ್ಳಬೇಕು. ಡಿವೈಎಸ್ಪಿ ದರ್ಜೆಯ ಅಧಿಕಾರಿಯೇ ತನಿಖೆ ನಡೆಸಬೇಕು’ ಎಂದು ಸುಪ್ರೀಂ ಕೋರ್ಟ್ ಮಾರ್ಚ್ 20ರಂದು ಆದೇಶ ನೀಡಿತ್ತು.