ಪಟ್ನಾ: ಇಲ್ಲಿನ ಪೂರ್ವ ಚಂಪಾರಣ್ನಲ್ಲಿ ರಸ್ತೆ ಬದಿಗೆ ಬಸ್ ಉರುಳಿಬಿದ್ದು ಬೆಂಕಿ ಹತ್ತಿಕೊಂಡ ಪರಿಣಾಮ 27 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಕೊಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಈ ದುರಂತ ಸಂಭವಿಸಿದೆ. ಬಸ್ನಲ್ಲಿ 32 ಮಂದಿ ಪ್ರಯಾಣಿಕರಿದ್ದರು. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಸಚಿವ ದಿನೇಶ್ ಚಂದ್ರ ಯಾದವ್ ತಿಳಿಸಿದ್ದಾರೆ.