ಚಾಮರಾಜನಗರ: ಪಟ್ಟಣದ ಮಾದಾಪುರ ಬಳಿಯ ಕೇಂದ್ರಿಯ ವಿದ್ಯಾಲಯದಲ್ಲಿ 2018–19ನೇ ಸಾಲಿನಿಂದಲೇ ಜಾರಿಗೆ ಬರುವಂತೆ 1ರಿಂದ 5ನೇ ತರಗತಿವರೆಗೆ (ಪ್ರತಿ ತರಗತಿಯಲ್ಲಿ 40 ವಿದ್ಯಾರ್ಥಿಗಳು) ಹೆಚ್ಚುವರಿ ತರಗತಿಗೆ ಮಂಜೂರಾತಿ ನೀಡಿ ನವದೆಹಲಿಯ ಕೇಂದ್ರೀಯ ವಿದ್ಯಾಲಯ ಸಂಘಟನೆ ಆದೇಶ ಹೊರಡಿಸಿದೆ.
ಇದರಿಂದಾಗಿ ಒಂದು ತರಗತಿಗೆ 80 ಮಕ್ಕಳು ದಾಖಲು ಮಾಡಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ.
ಇತ್ತೀಚೆಗೆ ಕೇಂದ್ರಿಯ ವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ವೇಳೆ ಹೆಚ್ಚುವರಿ ತರಗತಿಗೆ ಮಂಜೂರು ಮಾಡುವಂತೆ ಸಂಸದ ಆರ್.ಧ್ರುವನಾರಾಯಣ ಅವರುಕೇಂದ್ರ ಸಚಿವರಾದ ಅನಂತ್ ಕುಮಾರ್ ಅವರಿಗೆ ಮನವಿ ಮಾಡಿದ್ದರು. ನವದೆಹಲಿಯಲ್ಲಿರುವ ಕೇಂದ್ರಿಯ ವಿದ್ಯಾಲಯದ ಆಯುಕ್ತರಿಗೂ ಅವರು ಮನವಿ ಮಾಡಿದ್ದರು.