ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರ್ಬಲ ಮತದಾರರಲ್ಲಿ ಆತ್ಮ ಸ್ಥೈರ್ಯ ತುಂಬಿ

ಮಾಸ್ಟರ್ ಟ್ರೈನರ್, ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ: ಶಾಂತಾರಾಮ ಸೂಚನೆ
Last Updated 29 ಏಪ್ರಿಲ್ 2018, 4:34 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದುರ್ಬಲ ಮತದಾರರನ್ನು ಭೇಟಿ ಮಾಡಿ, ಅವರಲ್ಲಿ ಆತ್ಮ ಸ್ಥೈರ್ಯ ತುಂಬುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂನಲ್ಲಿ ವಿಧಾನಸಭಾ ಕ್ಷೇತ್ರ ಮಟ್ಟದ ಮಾಸ್ಟರ್ ಟ್ರೈನರ್ ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಈಗಾಗಲೇ ಜಿಲ್ಲೆಯ ಪ್ರತಿಯೊಂದು ಕ್ಷೇತ್ರದಲ್ಲಿ ದುರ್ಬಲ ಮತದಾರ ಮತ್ತು ಅವರು ವಾಸಿಸುವ ನಿರ್ದಿಷ್ಟ ಪ್ರದೇಶ
ಗಳನ್ನುಗುರುತಿಸಲಾಗಿದೆ. ದುರ್ಬಲ ಮತದಾರರು ಅಂತಹ ಆತ್ಮ ವಿಶ್ವಾಸವನ್ನು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭಯದಿಂದ ಮತ ಚಲಾಯಿಸುವಂತರಾಗಬೇಕು. ಈ ಕಾರ್ಯ ಸೆಕ್ಟರ್ ಅಧಿಕಾರಿಗಳ ತಂಡ ಮಾಡಬೇಕಾಗಿದೆ’ ಎಂದರು.

‘ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ದುರ್ಬಲ ಮತದಾರರ ಹಾಗೂ ಗುಂಪುಗಳನ್ನು ಭೇಟಿ ಮಾಡಿ, ಅವರ ಜೊತೆ ಚರ್ಚಿಸುವ ಮೂಲಕ ಅವರಿಂದ ಬರುವ ಪ್ರತಿಯೊಂದು ವಿಷಯಗಳನ್ನು ಆಲಿಸಿ ಮತದಾನ ಪ್ರಕ್ರಿಯೆಯಲ್ಲಿ ಮುಕ್ತವಾಗಿ ಆತ್ಮ ವಿಶ್ವಾಸದಿಂದ ಪಾಲ್ಗೊಳ್ಳುವ ಬಗ್ಗೆ ಮೂರು ದಿನಗಳ ಒಳಗಾಗಿ ದಾಖಲೆಗಳ ಸಮೇತ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

‘ಸ್ಥಳೀಯ ಬಿಎಲ್‌ಒ ಸಹಕಾರ ಪಡೆದುಕೊಳ್ಳುವ ಮೂಲಕ ದುರ್ಬಲ ಮತದಾರ ಮತ್ತು ಗುಂಪುಗಳನ್ನು ಸಂಪರ್ಕಿಸಿದ ಕುರಿತು ಅವರ ಹೆಸರು, ವಿಳಾಸ, ಸಂಬಂಧಪಟ್ಟ ಫೋಟೋಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು’ ಎಂದರು.

‘ಸೆಕ್ಟರ್ ವ್ಯಾಪ್ತಿಯಲ್ಲಿ ಕಂಡುಬರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಜಾಗೃತ ದಳದ ತಂಡಕ್ಕೆ ಮಾಹಿತಿ ರವಾನಿಸುವ ಕೆಲಸವಾಗಬೇಕು. ಜಿಲ್ಲೆಯ ಪ್ರತಿಯೊಂದು ಕ್ಷೇತ್ರಕ್ಕೆ 6 ಜಾಗೃತದ ದಳದ ತಂಡವನ್ನು ನೇಮಿಸಿದ್ದು, ಎರಡು ಕ್ಷೇತ್ರಗಳಲ್ಲಿ 2 ತಂಡಗಳನ್ನು ಹೆಚ್ಚಿಸಾಗಿದೆ. ಮತದಾನಕ್ಕೆ ಇವಿಎಂ ಯಂತ್ರಗಳನ್ನು ಸನ್ನದ್ದುಗೊಳಿಸಲು ಸಹ ಸೆಕ್ಟರ್ ಅಧಿಕಾರಿಗಳನ್ನು ತೊಡಗಿಸಿ
ಕೊಂಡಿರುವುದಾಗಿ’ ತಿಳಿಸಿದರು.

‘ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ನೀಡುವ ತರಬೇತಿಯಲ್ಲಿ ಸೆಕ್ಟರ್ ಅಧಿಕಾರಿಗಳು ಭಾಗವಹಿಸಬೇಕು. ಮತದಾನದ ದಿನದಂದು ಮತಗಟ್ಟೆ ಕೇಂದ್ರಕ್ಕೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಕಾರ್ಯಗತಗೊಳಿಸುವ ಕೆಲಸವಾಗಬೇಕು’ ಎಂದರು.

ಜಿಲ್ಲಾ ಸ್ವೀಪ್ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯಿತಿ ಸಿಇಒ ವಿಕಾಸ್ ಸುರಳಕರ್ ಮಾತನಾಡಿ, ‘ಮತಗಟ್ಟೆಗಳಲ್ಲಿ ಯಾವುದೇ ತರಹದ ತೊಂದರೆಯಾಗದಂತೆ ಆಯಾ ತಾಲ್ಲೂಕು ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ತಿಳಿಸಿ ಪರಿಹರಿಸಬೇಕು. ತಮಗೆ ನೀಡಿರುವ ಕೆಲಸವನ್ನು ಶ್ರದ್ಧೆಯಿಂದ ಕೆಲಸ ನಿರ್ವಹಿಸಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಶಿಧರ ಕುರೇರ, ಚುನಾವಣೆಯ ಮಾಸ್ಟರ್ ತರಬೇತುದಾರರಾದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಗಂಗಾಧರ ದಿವಟೂರ, ಉಪನ್ಯಾಸಕ ತೋಟದ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT