ಲಕ್ಷ್ಮೇಶ್ವರ: ಸರ್ಕಾರ ಕಡಲೆಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ, ಅಡರಕಟ್ಟಿ ಹಾಗೂ ಯಳವತ್ತಿ ಗ್ರಾಮಗಳಲ್ಲಿ ಖರೀದಿ ಕೇಂದ್ರಗಳನ್ನೂ ತೆರೆದಿದೆ. ಕಳೆದ ಒಂದು ತಿಂಗಳಿಂದ ಖರೀದಿ ಭರದಿಂದ ಸಾಗಿದ್ದು ಈಗಾಗಲೆ ನೂರಾರು ರೈತರು ಸಾವಿರಾರು ಕ್ವಿಂಟಲ್ ಫಸಲನ್ನು ಮಾರಾಟ ಮಾಡಿದ್ದಾರೆ.‘ಈ ಬಾರಿ ಹಿಂಗಾರು ಮಳೆ ಸ್ವಲ್ಪ ಉತ್ತಮ ಆಗಿದ್ದರಿಂದ ಕಡಲೆ ಚೆನ್ನಾಗಿ ಬೆಳೆದಿದ್ದು ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ರೈತರು ಕಂಗಾಲಾಗಿ ಬೆಂಬಲ ಬೆಲೆಯಲ್ಲಿ ಸರ್ಕಾರವೇ ಖರೀದಿ ಮಾಡಬೇಕು’ ಎಂದು ರೈತರು ಹೋರಾಟ ನಡೆಸಿದ್ದರು.ಕೊನೆಗೂ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ ಕಡಲೆಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. ಹೀಗಾಗಿ ಮೂರೂ ಕೇಂದ್ರಗಳಲ್ಲಿ ರೈತರು ಕಡಲೆ ಮಾರಾಟ ಮಾಡುತ್ತಿದ್ದಾರೆ.