ಕೋಪಗೊಂಡ ಅಪರಾಧಿಗಳು, ಬೀರಯ್ಯ ಜತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಮವಸ್ತ್ರ ಹರಿದು ಎಳೆದಾಡಿ ಮೈ ಮೇಲೆ ಕಲ್ಲು ಎತ್ತಿ ಹಾಕಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಇನ್ಸ್ಪೆಕ್ಟರ್, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು ಎಂದು ಜಿ.ಎನ್.ಅರುಣ್ ‘ಪ್ರಜಾವಾಣಿ’ಗೆ ತಿಳಿಸಿದರು.