ಚಾಮರಾಜನಗರ:ಸುಳ್ವಾಡಿ ಗ್ರಾಮದ ಕಿಚ್ಚುಗುತ್ತು ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ತೀವ್ರ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಗೇಶ್ (45)ಶುಕ್ರವಾರ ನಿಧನರಾದರು.
ಹನೂರು ತಾಲ್ಲೂಕಿನಮಾರ್ಟಳ್ಳಿ ನಿವಾಸಿ ನಿವಾಸಿಯಾದ ನಾಗೇಶ್ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನ ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಬಳಿ ಸೇರಿದಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ಸುಳ್ವಾಡಿ ದುರಂತದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿದ್ದು, ಮೈಸೂರಿನ ಹನ್ನೊಂದು ಆಸ್ಪತ್ರೆಗಳಲ್ಲಿ 100 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 36 ಜನರು ಐಸಿಯುನಲ್ಲಿದ್ದು, 21 ಜನರಿಗೆ ವೆಂಟಿಲೇಷನ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕೀಟನಾಶಕಗಳಲ್ಲಿ ಬಳಸಲಾಗುವ ‘ಆರ್ಗನೊ ಫಾಸ್ಫರಸ್’ ಗುಂಪಿಗೆ ಸೇರಿದ ‘ಮೊನೊ ಕ್ರೋಟೊಫಾಸ್’ ರಾಸಾಯನಿಕ ಅಂಶಪ್ರಸಾದ ಸೇವಿಸಿ ಅಸ್ಸ್ಥರಾದವರ ದೇಹದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರಿಗೆ ನೀಡಲಾದ ಪ್ರಯೋಗಾಲಯ ವರದಿಯಲ್ಲಿದೆ.