ಸಾರ್ವಜನಿಕ ಶೌಚಾಲಯವಿಲ್ಲ: ಜಿಲ್ಲಾ ಕೇಂದ್ರಕ್ಕೆ ಗ್ರಾಮೀಣ ಭಾಗದ ಜನರು ಹೆಚ್ಚು ಬರುತ್ತಾರೆ. ಆದರೆ, ಇಲ್ಲಿ ಸಮರ್ಪಕ ಹಾಗೂ ಸ್ವಚ್ಛತೆಯಿಂದ ಕೂಡಿದ ಒಂದೂ ಸಾರ್ವಜನಿಕ ಶೌಚಾಲಯವಿಲ್ಲ. ಮಹಿಳೆಯರು ಸಂಕಷ್ಟ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಆಡಳಿತ ಸಂಪೂರ್ಣ ವಿಫಲವಾಗಿದೆ. ಹೀಗಾಗಿ, ಹೊಸ ಆಲೋಚನೆಯೊಂದಿಗೆ ಅಧಿಕಾರಕ್ಕೆ ಬರುವ ಹಂಬಲ ಬಿಎಸ್ಪಿಗಿದೆ. ಇದಕ್ಕೆ ಎಲ್ಲ ಮತದಾರು ಸಹಕಾರ ನೀಡಬೇಕು ಎಂದರು.