<p><strong>ಬಾಗೇಪಲ್ಲಿ:</strong> 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ನೋಂದಾಯಿತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ಪರೀಕ್ಷೆ ನೋಡಲ್ ಅಧಿಕಾರಿ ಪಿ.ಎನ್.ನಾರಾಯಣಸ್ವಾಮಿ ಮತ್ತು ವಿವಿಧ ವಿಷಯಗಳ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಈ ವೇಳೆ ಕನ್ನಡ ಶಿಕ್ಷಕ ಆರ್.ಸುಧಾಕರ್, ಇಂಗ್ಲಿಷ್ ಶಿಕ್ಷಕ ಇ.ಮಂಜುನಾಥ್, ಹಿಂದಿ ಶಿಕ್ಷಕ ಈಶ್ವರಾಚಾರಿ, ಗಣಿತ ಶಿಕ್ಷಕ ಎನ್.ಕುಮಾರ್, ವಿಜ್ಞಾನ ಶಿಕ್ಷಕ ಮಹಮದ್ ಹಮೀದ್ ಮತ್ತು ಸಮಾಜ ಶಿಕ್ಷಕ ಗಂಗರಾಜು ವಿದ್ಯಾರ್ಥಿಗಳ ಸಂದೇಹ ನಿವಾರಣೆ ಮಾಡಿದರು.</p>.<p>ಎರಡೂ ತಾಲ್ಲೂಕುಗಳಿಂದ ಒಟ್ಟು 99 ಪ್ರಶ್ನೆಗಳು ಸ್ವೀಕೃತವಾದವು. ಇವುಗಳಲ್ಲಿ ಕನ್ನಡ ವಿಷಯಕ್ಕೆ ಸಂಬಂಧಿಸಿದ 18, ಇಂಗ್ಲಿಷ್ 15, ಹಿಂದಿ 15, ಗಣಿತದ 17, ವಿಜ್ಞಾನದ 18 ಹಾಗೂ ಸಮಾಜ ವಿಜ್ಞಾನದ 16 ಪ್ರಶ್ನೆಗಳಿಗೆ ಅಧಿಕಾರಿಗಳು ಮತ್ತು ಶಿಕ್ಷಕರು ಉತ್ತರಿಸಿ ಮಾರ್ಗದರ್ಶನ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ‘ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ವಿದ್ಯಾರ್ಥಿಗಳಿಂದ ಬಂದ 99 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಮಕ್ಕಳ ಸಂದೇಹಗಳನ್ನು ನಿವಾರಿಸಿ ಪರೀಕ್ಷಾ ಭೀತಿ ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ನೋಡಲ್ ಅಧಿಕಾರಿ ಪಿ.ಎನ್.ನಾರಾಯಣಸ್ವಾಮಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಒಟ್ಟು 2201 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸಮಗ್ರ ಸಿದ್ಧತೆ ಮತ್ತು ವ್ಯವಸ್ಥೆಗಳ ಕುರಿತು ಫೋನ್-ಇನ್ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ನೋಂದಾಯಿತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ಪರೀಕ್ಷೆ ನೋಡಲ್ ಅಧಿಕಾರಿ ಪಿ.ಎನ್.ನಾರಾಯಣಸ್ವಾಮಿ ಮತ್ತು ವಿವಿಧ ವಿಷಯಗಳ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಈ ವೇಳೆ ಕನ್ನಡ ಶಿಕ್ಷಕ ಆರ್.ಸುಧಾಕರ್, ಇಂಗ್ಲಿಷ್ ಶಿಕ್ಷಕ ಇ.ಮಂಜುನಾಥ್, ಹಿಂದಿ ಶಿಕ್ಷಕ ಈಶ್ವರಾಚಾರಿ, ಗಣಿತ ಶಿಕ್ಷಕ ಎನ್.ಕುಮಾರ್, ವಿಜ್ಞಾನ ಶಿಕ್ಷಕ ಮಹಮದ್ ಹಮೀದ್ ಮತ್ತು ಸಮಾಜ ಶಿಕ್ಷಕ ಗಂಗರಾಜು ವಿದ್ಯಾರ್ಥಿಗಳ ಸಂದೇಹ ನಿವಾರಣೆ ಮಾಡಿದರು.</p>.<p>ಎರಡೂ ತಾಲ್ಲೂಕುಗಳಿಂದ ಒಟ್ಟು 99 ಪ್ರಶ್ನೆಗಳು ಸ್ವೀಕೃತವಾದವು. ಇವುಗಳಲ್ಲಿ ಕನ್ನಡ ವಿಷಯಕ್ಕೆ ಸಂಬಂಧಿಸಿದ 18, ಇಂಗ್ಲಿಷ್ 15, ಹಿಂದಿ 15, ಗಣಿತದ 17, ವಿಜ್ಞಾನದ 18 ಹಾಗೂ ಸಮಾಜ ವಿಜ್ಞಾನದ 16 ಪ್ರಶ್ನೆಗಳಿಗೆ ಅಧಿಕಾರಿಗಳು ಮತ್ತು ಶಿಕ್ಷಕರು ಉತ್ತರಿಸಿ ಮಾರ್ಗದರ್ಶನ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ‘ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ವಿದ್ಯಾರ್ಥಿಗಳಿಂದ ಬಂದ 99 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಮಕ್ಕಳ ಸಂದೇಹಗಳನ್ನು ನಿವಾರಿಸಿ ಪರೀಕ್ಷಾ ಭೀತಿ ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ನೋಡಲ್ ಅಧಿಕಾರಿ ಪಿ.ಎನ್.ನಾರಾಯಣಸ್ವಾಮಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಒಟ್ಟು 2201 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸಮಗ್ರ ಸಿದ್ಧತೆ ಮತ್ತು ವ್ಯವಸ್ಥೆಗಳ ಕುರಿತು ಫೋನ್-ಇನ್ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>