‘ಯಡಿಯೂರಪ್ಪ ಅವರು ತಮ್ಮ ಕುರ್ಚಿ ಉಳಿವಿಗಾಗಿ ಅನರ್ಹರನ್ನು ಓಲೈಸುವುದು ಮಾತ್ರವಲ್ಲದೆ, ಪಕ್ಷಕ್ಕಾಗಿ ಹಗಲಿರುಳು ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಅನರ್ಹ ಶಾಸಕರ ಬೆಂಬಲಿಗರು, ಪಕ್ಷದ ಸಿದ್ಧಾಂತ ಗೊತ್ತಿಲ್ಲದವರು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಕೂಡ ಪಡೆಯದವರಿಗೂ ನಿಗಮ, ಮಂಡಳಿಗಳಲ್ಲಿ ಮಣೆ ಹಾಕುತ್ತಿದ್ದಾರೆ’ ಎಂದು ಬಿಜೆಪಿಯ ಸ್ಥಳೀಯ ಮುಖಂಡರು ಆರ್ಎಸ್ಎಸ್ ಮುಖಂಡರ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.