ಗಲ್ಲಿ ಗಲ್ಲಿಗಳಲ್ಲಿ, ಊರು ಕೇರಿಗಳಲ್ಲಿ, ನಗರ, ಪಟ್ಟಣ ಪ್ರದೇಶ ಹೀಗೆ ಎಲ್ಲೆಂದರಲ್ಲಿ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕನ ಮೂರ್ತಿಗಳಿಗೆ ಬಗೆ ಬಗೆಯ ಪೂಜೆಗಳನ್ನು ಮಾಡಲಾಯಿತು. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಿತಿಗಳು ಹಬ್ಬಕ್ಕೆ ಮೆರಗು ತುಂಬುತ್ತಿವೆ.