ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ– ಒಂದೇ ಕುಟುಂಬದ ನಾಲ್ವರಿಗೆ ಗಾಯ

Last Updated 8 ಆಗಸ್ಟ್ 2022, 4:29 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಗರ ಹೊರವಲಯದ ಹಂಡಿಗನಾಳ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಎ.ಹುಣಸೇನಹಳ್ಳಿಯ ಗ್ರಾಮದ ಮುನಿರಾಜು ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಬೈಕ್‌ನಲ್ಲಿ ಚಿಕ್ಕಬಳ್ಳಾಪುರ ಕಡೆಯಿಂದ ಶಿಡ್ಲಘಟ್ಟ ಕಡೆಗೆ ಬರುವ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮುನಿರಾಜು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮುನಿರಾಜು ಪತ್ನಿ ನಯನ, ಮಕ್ಕಳಾದ ನಿಕಿಲ್, ನಿಹಾಗ್‌ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತವಾದ ಕೂಡಲೇ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT