<p><strong>ಚಿಂತಾಮಣಿ</strong>: ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ದೊಡ್ಡಕೆರೆ ಬಳಿಯಲ್ಲಿರುವ ವೀರಭದ್ರಸ್ವಾಮಿ ದೇವಾಲಯದ ಬೀಗ ಹೊಡೆದು ಒಳನುಗ್ಗಿರುವ ಕಳ್ಳರು ಹುಂಡಿಯ ಬೀಗ ಮುರಿದು ₹1ಲಕ್ಷ ನಗದು ಕಳ್ಳತನ ಮಾಡಿದ್ದಾರೆ.</p>.<p>ಈ ಸಂಬಂದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.</p>.<p>‘ವರ್ಷದ ಹಿಂದೆ ದೇವಾಲಯದ ಟ್ರಸ್ಟ್ನಿಂದ ನೂತನವಾಗಿ ದೇವಾಲಯ ಪ್ರತಿಷ್ಠಾಪಿಸಲಾಗಿತ್ತು. ಪ್ರತಿದಿನ ಬೆಳಿಗ್ಗೆ 7-30 ರಿಂದ 10 ಗಂಟೆಯವರೆಗೆ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗುತ್ತಿತು. ನನ್ನ ಬಳಿ ಒಂದು ಬೀಗದ ಕೀ ಮತ್ತು ಅರ್ಚಕ ಮಂಜುನಾಥ ದೀಕ್ಷಿತ್ ಬಳಿ ಮತ್ತೊಂದು ಕೀ ಇತ್ತು’.</p>.<p>‘ಮೇ 18 ರಂದು ರಾತ್ರಿ 7 ಗಂಟೆಯಲ್ಲಿ ನಾನು ಮತ್ತು ಗ್ರಾಮದ ರಾಮಚಂದ್ರಪ್ಪ ಬಾಗಿಲು ಬೀಗಹಾಕಿಕೊಂಡು ಹೋಗಿದ್ದೆವೆ. ಮರುದಿನ ಬೆಳಿಗ್ಗೆ 6 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲು ಹೋದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ’ ಎಂದು ದೇವಸ್ಥಾನದ ಧರ್ಮದರ್ಶಿ ಎನ್.ವೀರಭದ್ರಾರೆಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ದೊಡ್ಡಕೆರೆ ಬಳಿಯಲ್ಲಿರುವ ವೀರಭದ್ರಸ್ವಾಮಿ ದೇವಾಲಯದ ಬೀಗ ಹೊಡೆದು ಒಳನುಗ್ಗಿರುವ ಕಳ್ಳರು ಹುಂಡಿಯ ಬೀಗ ಮುರಿದು ₹1ಲಕ್ಷ ನಗದು ಕಳ್ಳತನ ಮಾಡಿದ್ದಾರೆ.</p>.<p>ಈ ಸಂಬಂದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.</p>.<p>‘ವರ್ಷದ ಹಿಂದೆ ದೇವಾಲಯದ ಟ್ರಸ್ಟ್ನಿಂದ ನೂತನವಾಗಿ ದೇವಾಲಯ ಪ್ರತಿಷ್ಠಾಪಿಸಲಾಗಿತ್ತು. ಪ್ರತಿದಿನ ಬೆಳಿಗ್ಗೆ 7-30 ರಿಂದ 10 ಗಂಟೆಯವರೆಗೆ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗುತ್ತಿತು. ನನ್ನ ಬಳಿ ಒಂದು ಬೀಗದ ಕೀ ಮತ್ತು ಅರ್ಚಕ ಮಂಜುನಾಥ ದೀಕ್ಷಿತ್ ಬಳಿ ಮತ್ತೊಂದು ಕೀ ಇತ್ತು’.</p>.<p>‘ಮೇ 18 ರಂದು ರಾತ್ರಿ 7 ಗಂಟೆಯಲ್ಲಿ ನಾನು ಮತ್ತು ಗ್ರಾಮದ ರಾಮಚಂದ್ರಪ್ಪ ಬಾಗಿಲು ಬೀಗಹಾಕಿಕೊಂಡು ಹೋಗಿದ್ದೆವೆ. ಮರುದಿನ ಬೆಳಿಗ್ಗೆ 6 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲು ಹೋದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ’ ಎಂದು ದೇವಸ್ಥಾನದ ಧರ್ಮದರ್ಶಿ ಎನ್.ವೀರಭದ್ರಾರೆಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>